BREAKING NEWS

ವೆಸ್ಟೆಂಡ್ ಹೋಟೆಲ್​​ನಲ್ಲಿ ಇದ್ಕೊಂಡು ಬೆಳಗ್ಗೆಯಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡ್ತಿದ್ದೆ : ಎಚ್​ಡಿಕೆ

ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್‌ಡಿಕೆ ಖಾರವಾಗಿ ಪ್ರತಿಕ್ರಿಯೆ ನೀಡುವ ಮೂಲಕವಾಗಿ ತಿರುಗೇಟು ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾಜಿ ಸಿಎಂ ಎಚ್.ಡಿಕೆ ಮಾತನಾಡಿ, ಈ ಬಗ್ಗೆ ಸಾವಿರಬಾರಿ ಹೇಳಿದ್ದೇನೆ, ಮೊದಲನೇ ಅಪರಾಧ ಸಿದ್ದರಾಮಯ್ಯ ಅವರದ್ದೇ ಆಗಿದೆ. ಜಾರ್ಜ್ ಹೆಸರಲ್ಲಿ ಮನೆ ತಗೊಂಡು ಅದರಲ್ಲಿ ಮುಂದುವರೆದರು. ನನಗೆ ಸರ್ಕಾರಿ ಕ್ವಾಟರ್ಸ್ ಮನೆ ಬಿಟ್ಟುಕೊಡಲಿಲ್ಲ. ಈಗ ಕೇಂದ್ರ ನಾಯಕರೆಲ್ಲ ಬರ್ತಿದ್ದಾರಲ್ಲ, ಅವರು ಎಲ್ಲಿ ವಾಸ್ತವ್ಯ ಮಾಡ್ತಾರೆ ? ವೆಸ್ಟೆಂಡ್ ಹೋಟೆಲ್​​​ನಲ್ಲಿ ನಾನು ಪರ್ಮನೆಂಟ್ ಆಗಿ ಇದ್ದವನಾ ? ಎಂದು ಪ್ರಶ್ನೆ ಮಾಡಿದ್ದಾರೆ.

ನಾನು ಹೋಟೆಲ್​​ನಲ್ಲಿ ಇದ್ದುಕೊಂಡು ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡುತಿದ್ದೆ. ಸಿದ್ದರಾಮಯ್ಯ ಯಾವ ರೀತಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲಿರಿಗೂ ಗೊತ್ತಿರುವ ವಿಚಾರವಾಗಿದೆ. ಮಧ್ಯಾಹ್ನ ೧ ಗಂಟೆಗೆ ವಿಧಾನಸೌಧ ಖಾಲಿ ಮಾಡಿಕೊಂಡ ಹೋದ್ರೆ ಎಲ್ಲಿಗೆ ಹೋಗ್ತಿದ್ರು, ಆರು ಗಂಟೆ ಮೇಲೆ ಯಾರಿಗೆ ಸಿಗುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

ನಾನು ರಾತ್ರಿ ೧೨ ಗಂಟೆವೆರೆಗೆ ಕೆಲಸ ಮಾಡ್ತಿದ್ದೆ. ಕಾಂಗ್ರೆಸ್​​ನ 78 ಶಾಸಕರಿಗೆ ನನ್ನ 14 ತಿಂಗಳ ಆಡಳಿತ ಅವಧಿಯಲ್ಲಿ 19 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದೀನಿ. ಇವತ್ತು ಬಿಜೆಪಿ ಸರ್ಕಾರದಲ್ಲಿ ಕೆಲಸ ನಡೆದಿರೋದು, ನಾನು ಸಿಎಂ ಆಗಿದ್ದಾಗ ಕೊಟ್ಟ ದುಡ್ಡಿನಿಂದ. ಬಾದಾಮಿಗೆ ಅಭಿವೃದ್ದಿ ಕೆಲಸ ಆಗಿದ್ದು, ನಾನು ಕೊಟ್ಟ ದುಡ್ಡಿನಲ್ಲಿ‌ಯೇ ಎಂದು ತಮ್ಮ ಆಢಳಿತಾವಧಿಯ ಕುರಿತಾಗಿ ಮಾತನಾಡಿದ್ದಾರೆ.

ಸಿದ್ದರಾಮಯ್ಯಗೆ ಬಿಜೆಪಿಯವರಿಂದ ದುಡ್ಡು ತೊಗೊಳೊದಕ್ಕೆ ಆಯ್ತಾ? ಜನರ ಬಳಿಗೆ ಹೋಗಿ ಕೆಲಸ ಹೆಂಗೆ ಮಾಡಬೇಕು ಎಂಬುದನ್ನ ಸಿದ್ದರಾಮಯ್ಯ ಅವರಿಂದ ಕಲಿಯಬೇಕಿಲ್ಲ. ಬಾದಾಮಿಗೆ ತಂದಿದ್ದು ನಾಲ್ಕು ಸಾವಿರ ಕೋಟಿ ಎಲ್ಲಿದೆ ದುಡ್ಡು? ಮಳೆಗಾಲದಲ್ಲಿ ಜಲಾವೃತವಾಗುವ ಯಾವುದಾದ್ರೂ ಒಂದು ಹಳ್ಳಿಗೆ ಪುನರ್ ವಸತಿ ಕಲ್ಪಿಸಿದ್ದಾರಾ? 5 ವರ್ಷದಲ್ಲಿ ಬಾದಾಮಿಗೆ ಮೂಲಭೂತ ಸೌಲಭ್ಯವನ್ನಾದರೂ ಕಲ್ಪಿಸಿದ್ದಾರಾ ಎಂದು ಎಚ್.ಡಿಕೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

lokesh

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

9 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago