The Chief Minister of Karnataka, Shri H.D. Kumaraswamy meeting the Union Minister for Consumer Affairs, Food and Public Distribution, Shri Ram Vilas Paswan, in New Delhi on October 06, 2018.
ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್ಡಿಕೆ ಖಾರವಾಗಿ ಪ್ರತಿಕ್ರಿಯೆ ನೀಡುವ ಮೂಲಕವಾಗಿ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾಜಿ ಸಿಎಂ ಎಚ್.ಡಿಕೆ ಮಾತನಾಡಿ, ಈ ಬಗ್ಗೆ ಸಾವಿರಬಾರಿ ಹೇಳಿದ್ದೇನೆ, ಮೊದಲನೇ ಅಪರಾಧ ಸಿದ್ದರಾಮಯ್ಯ ಅವರದ್ದೇ ಆಗಿದೆ. ಜಾರ್ಜ್ ಹೆಸರಲ್ಲಿ ಮನೆ ತಗೊಂಡು ಅದರಲ್ಲಿ ಮುಂದುವರೆದರು. ನನಗೆ ಸರ್ಕಾರಿ ಕ್ವಾಟರ್ಸ್ ಮನೆ ಬಿಟ್ಟುಕೊಡಲಿಲ್ಲ. ಈಗ ಕೇಂದ್ರ ನಾಯಕರೆಲ್ಲ ಬರ್ತಿದ್ದಾರಲ್ಲ, ಅವರು ಎಲ್ಲಿ ವಾಸ್ತವ್ಯ ಮಾಡ್ತಾರೆ ? ವೆಸ್ಟೆಂಡ್ ಹೋಟೆಲ್ನಲ್ಲಿ ನಾನು ಪರ್ಮನೆಂಟ್ ಆಗಿ ಇದ್ದವನಾ ? ಎಂದು ಪ್ರಶ್ನೆ ಮಾಡಿದ್ದಾರೆ.
ನಾನು ಹೋಟೆಲ್ನಲ್ಲಿ ಇದ್ದುಕೊಂಡು ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೂ ಕೆಲಸ ಮಾಡುತಿದ್ದೆ. ಸಿದ್ದರಾಮಯ್ಯ ಯಾವ ರೀತಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲಿರಿಗೂ ಗೊತ್ತಿರುವ ವಿಚಾರವಾಗಿದೆ. ಮಧ್ಯಾಹ್ನ ೧ ಗಂಟೆಗೆ ವಿಧಾನಸೌಧ ಖಾಲಿ ಮಾಡಿಕೊಂಡ ಹೋದ್ರೆ ಎಲ್ಲಿಗೆ ಹೋಗ್ತಿದ್ರು, ಆರು ಗಂಟೆ ಮೇಲೆ ಯಾರಿಗೆ ಸಿಗುತ್ತಿದ್ದರು ಎಂದು ವ್ಯಂಗ್ಯವಾಡಿದ್ದಾರೆ.
ನಾನು ರಾತ್ರಿ ೧೨ ಗಂಟೆವೆರೆಗೆ ಕೆಲಸ ಮಾಡ್ತಿದ್ದೆ. ಕಾಂಗ್ರೆಸ್ನ 78 ಶಾಸಕರಿಗೆ ನನ್ನ 14 ತಿಂಗಳ ಆಡಳಿತ ಅವಧಿಯಲ್ಲಿ 19 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದೀನಿ. ಇವತ್ತು ಬಿಜೆಪಿ ಸರ್ಕಾರದಲ್ಲಿ ಕೆಲಸ ನಡೆದಿರೋದು, ನಾನು ಸಿಎಂ ಆಗಿದ್ದಾಗ ಕೊಟ್ಟ ದುಡ್ಡಿನಿಂದ. ಬಾದಾಮಿಗೆ ಅಭಿವೃದ್ದಿ ಕೆಲಸ ಆಗಿದ್ದು, ನಾನು ಕೊಟ್ಟ ದುಡ್ಡಿನಲ್ಲಿಯೇ ಎಂದು ತಮ್ಮ ಆಢಳಿತಾವಧಿಯ ಕುರಿತಾಗಿ ಮಾತನಾಡಿದ್ದಾರೆ.
ಸಿದ್ದರಾಮಯ್ಯಗೆ ಬಿಜೆಪಿಯವರಿಂದ ದುಡ್ಡು ತೊಗೊಳೊದಕ್ಕೆ ಆಯ್ತಾ? ಜನರ ಬಳಿಗೆ ಹೋಗಿ ಕೆಲಸ ಹೆಂಗೆ ಮಾಡಬೇಕು ಎಂಬುದನ್ನ ಸಿದ್ದರಾಮಯ್ಯ ಅವರಿಂದ ಕಲಿಯಬೇಕಿಲ್ಲ. ಬಾದಾಮಿಗೆ ತಂದಿದ್ದು ನಾಲ್ಕು ಸಾವಿರ ಕೋಟಿ ಎಲ್ಲಿದೆ ದುಡ್ಡು? ಮಳೆಗಾಲದಲ್ಲಿ ಜಲಾವೃತವಾಗುವ ಯಾವುದಾದ್ರೂ ಒಂದು ಹಳ್ಳಿಗೆ ಪುನರ್ ವಸತಿ ಕಲ್ಪಿಸಿದ್ದಾರಾ? 5 ವರ್ಷದಲ್ಲಿ ಬಾದಾಮಿಗೆ ಮೂಲಭೂತ ಸೌಲಭ್ಯವನ್ನಾದರೂ ಕಲ್ಪಿಸಿದ್ದಾರಾ ಎಂದು ಎಚ್.ಡಿಕೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…