BREAKING NEWS

ಹೆಚ್​​​.ಡಿ.ಕುಮಾರಸ್ವಾಮಿ ಹೋರಾಟವನ್ನು ನಾನು ಸ್ವಾಗತಿಸುತ್ತೇನೆ: ಡಿಕೆ ಶಿವಕುಮಾರ್

ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.

ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೆಚ್​ಡಿ ಕುಮಾರಸ್ವಾಮಿ ಅವರ ಅವಧಿಯಲ್ಲೇ ಇದಕ್ಕೆ ಹಣ ಬಿಡುಗಡೆ ಆಗಿತ್ತು. ಟೆಂಡರ್ ಸಹ ಆಗಿ ನಿಂತಿತ್ತು. ಈಗ ರಾಜಕೀಯವಾಗಿ ಎತ್ತಿಕಟ್ಟುತ್ತಿದ್ದಾರೆ. ತೊಂದರೆಯಿಲ್ಲ. ಅವರ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.

ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೆ ಆರಂಭದಿಂದಲೂ ಸಂಕಷ್ಟ ಎದುರಾಗುತ್ತಲೇ ಇದೆ. ಹಲವು ಬಾರಿ ಶಂಕುಸ್ಥಾಪನೆ ಆಗಿದ್ದರೂ ಅದರ ನಿರ್ಮಾಣ ಕಾರ್ಯ ನಡೆದಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ವಿವಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಬಳಿಕ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಕಾಮಗಾರಿ ಆರಂಭವಾಗುವ ಹಂತದಲ್ಲೇ ವಿವಿ ಸ್ಥಳಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಸ್ಥಳಾಂತರ ನಿರ್ಧಾರವನ್ನು ಖಂಡಿಸಿವೆ.

ಶತಾಯ ಗತಾಯ ಕನಕಪುರಕ್ಕೆ ಒಂದು ಮೆಡಿಕಲ್‌ ಕಾಲೇಜು ತೆಗೆದುಕೊಂಡು ಹೋಗಬೇಕು ಎಂದು ಪಟ್ಟುಹಿಡಿದಿರುವ ಡಿಕೆ ಶಿವಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಆಡಳಿತ ಕಚೇರಿಯನ್ನ ರಾಮನಗರದಲ್ಲಿ ನಿರ್ಮಿಸಿ, ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಮನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಿದ್ದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನ ವಿರೋಧಿಸಿ ಪಕ್ಷಾತೀತ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಶಿಫ್ಟ್ ಆಗಬಾರದು, ಅವರದ್ದೇ ಸರ್ಕಾರ ಇರುವಾಗ ಕನಕಪುರಕ್ಕೆ ಹೊಸ ಕಾಲೇಜು ಮಂಜೂರು ಮಾಡಿಸಿಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

andolanait

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

15 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

21 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

25 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

29 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago