BREAKING NEWS

ಹೆಚ್​​​.ಡಿ.ಕುಮಾರಸ್ವಾಮಿ ಹೋರಾಟವನ್ನು ನಾನು ಸ್ವಾಗತಿಸುತ್ತೇನೆ: ಡಿಕೆ ಶಿವಕುಮಾರ್

ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.

ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೆಚ್​ಡಿ ಕುಮಾರಸ್ವಾಮಿ ಅವರ ಅವಧಿಯಲ್ಲೇ ಇದಕ್ಕೆ ಹಣ ಬಿಡುಗಡೆ ಆಗಿತ್ತು. ಟೆಂಡರ್ ಸಹ ಆಗಿ ನಿಂತಿತ್ತು. ಈಗ ರಾಜಕೀಯವಾಗಿ ಎತ್ತಿಕಟ್ಟುತ್ತಿದ್ದಾರೆ. ತೊಂದರೆಯಿಲ್ಲ. ಅವರ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.

ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೆ ಆರಂಭದಿಂದಲೂ ಸಂಕಷ್ಟ ಎದುರಾಗುತ್ತಲೇ ಇದೆ. ಹಲವು ಬಾರಿ ಶಂಕುಸ್ಥಾಪನೆ ಆಗಿದ್ದರೂ ಅದರ ನಿರ್ಮಾಣ ಕಾರ್ಯ ನಡೆದಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ವಿವಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಬಳಿಕ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಕಾಮಗಾರಿ ಆರಂಭವಾಗುವ ಹಂತದಲ್ಲೇ ವಿವಿ ಸ್ಥಳಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಸ್ಥಳಾಂತರ ನಿರ್ಧಾರವನ್ನು ಖಂಡಿಸಿವೆ.

ಶತಾಯ ಗತಾಯ ಕನಕಪುರಕ್ಕೆ ಒಂದು ಮೆಡಿಕಲ್‌ ಕಾಲೇಜು ತೆಗೆದುಕೊಂಡು ಹೋಗಬೇಕು ಎಂದು ಪಟ್ಟುಹಿಡಿದಿರುವ ಡಿಕೆ ಶಿವಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಆಡಳಿತ ಕಚೇರಿಯನ್ನ ರಾಮನಗರದಲ್ಲಿ ನಿರ್ಮಿಸಿ, ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ರಾಮನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಿದ್ದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನ ವಿರೋಧಿಸಿ ಪಕ್ಷಾತೀತ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಶಿಫ್ಟ್ ಆಗಬಾರದು, ಅವರದ್ದೇ ಸರ್ಕಾರ ಇರುವಾಗ ಕನಕಪುರಕ್ಕೆ ಹೊಸ ಕಾಲೇಜು ಮಂಜೂರು ಮಾಡಿಸಿಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

andolanait

Recent Posts

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

7 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

1 hour ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

1 hour ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

3 hours ago