ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ರಾಮನಗರದಿಂದ ಕನಕಪುರಕ್ಕೆ ಸ್ಥಳಾಂತರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ರಾಮನಗರದ ಜನರು ಮತ್ತು ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿವಿ ಸ್ಥಳಾಂತರ ಮಾಡದಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.
ಕನಕಪುರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೆಚ್ಡಿ ಕುಮಾರಸ್ವಾಮಿ ಅವರ ಅವಧಿಯಲ್ಲೇ ಇದಕ್ಕೆ ಹಣ ಬಿಡುಗಡೆ ಆಗಿತ್ತು. ಟೆಂಡರ್ ಸಹ ಆಗಿ ನಿಂತಿತ್ತು. ಈಗ ರಾಜಕೀಯವಾಗಿ ಎತ್ತಿಕಟ್ಟುತ್ತಿದ್ದಾರೆ. ತೊಂದರೆಯಿಲ್ಲ. ಅವರ ಹೋರಾಟವನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.
ರಾಮನಗರದ ಬಹುನಿರೀಕ್ಷಿತ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆಗೆ ಆರಂಭದಿಂದಲೂ ಸಂಕಷ್ಟ ಎದುರಾಗುತ್ತಲೇ ಇದೆ. ಹಲವು ಬಾರಿ ಶಂಕುಸ್ಥಾಪನೆ ಆಗಿದ್ದರೂ ಅದರ ನಿರ್ಮಾಣ ಕಾರ್ಯ ನಡೆದಿಲ್ಲ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ವಿವಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಬಳಿಕ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಗುದ್ದಲಿಪೂಜೆ ನೆರವೇರಿಸಿದ್ದರು. ಇದೀಗ ಕಾಮಗಾರಿ ಆರಂಭವಾಗುವ ಹಂತದಲ್ಲೇ ವಿವಿ ಸ್ಥಳಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ.
ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕನಕಪುರಕ್ಕೆ ಶಿಫ್ಟ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ವಿವಿಧ ಸಂಘಟನೆಗಳು ಸ್ಥಳಾಂತರ ನಿರ್ಧಾರವನ್ನು ಖಂಡಿಸಿವೆ.
ಶತಾಯ ಗತಾಯ ಕನಕಪುರಕ್ಕೆ ಒಂದು ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋಗಬೇಕು ಎಂದು ಪಟ್ಟುಹಿಡಿದಿರುವ ಡಿಕೆ ಶಿವಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿವಿಯ ಆಡಳಿತ ಕಚೇರಿಯನ್ನ ರಾಮನಗರದಲ್ಲಿ ನಿರ್ಮಿಸಿ, ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ರಾಮನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಬೇಕಿದ್ದ ಮೆಡಿಕಲ್ ಕಾಲೇಜು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನ ವಿರೋಧಿಸಿ ಪಕ್ಷಾತೀತ ಹೋರಾಟಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಶಿಫ್ಟ್ ಆಗಬಾರದು, ಅವರದ್ದೇ ಸರ್ಕಾರ ಇರುವಾಗ ಕನಕಪುರಕ್ಕೆ ಹೊಸ ಕಾಲೇಜು ಮಂಜೂರು ಮಾಡಿಸಿಕೊಳ್ಳಿ ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…