BREAKING NEWS

ಎಚ್‌ಡಿಕೆ ಆರೋಪಕ್ಕೆ ಸದನದಲ್ಲಿ ಉತ್ತರ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿಯವರು ಹತಾಶೆ, ದ್ವೇಷದಿಂದ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಹೊಸ ಸರ್ಕಾರ ರಚನೆಯಾದ ಮೇಲೆ ವರ್ಗಾವಣೆಯಾಗುವುದು ಸಾಮಾನ್ಯ. ಅದರಲ್ಲಿ ದಂಧೆ, ಲಂಚ ನಡೆದಿದೆ ಎನ್ನುವುದು ಸುಳ್ಳು ಆರೋಪ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗಳು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ವರ್ಗಾವಣೆಯಾಗಿರಲಿಲ್ಲವೇ, ಆಗ ಅವರು ಲಂಚ ತೆಗೆದುಕೊಂಡಿದ್ದರೇ, ಟ್ರಾನ್ಸ್ ಫರ್ ಆದಾಗ ದುಡ್ಡು ತಗೊಂಡಿದ್ದಾರೆ, ಲಂಚ ತೆಗೆದುಕೊಂಡಿದ್ದಾರೆ ಎನ್ನುವುದು ಕೇವಲ ಊಹೆಯಷ್ಟೇ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯುತ್ತದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಎಲೆಕ್ಷನ್ ಎಂದು ವರ್ಗಾವಣೆಗಳು ಆಗಿರಲಿಲ್ಲ, ಈಗ ನಡೆಯುತ್ತಿರುವ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸಾಮಾನ್ಯ ಪ್ರಕ್ರಿಯೆ ಎಂದರು.

ಕುಮಾರಸ್ವಾಮಿ ಹಿಟ್ ಅಂಡ್ ರನ್ ಕೇಸು: ಕುಮಾರಸ್ವಾಮಿಯವರು ಯಾವಾಗಲೂ ಹಿಟ್ ಅಂಡ್ ರನ್ ಕೇಸು, ಅವರು ಇದುವರೆಗೆ ಮಾಡಿರುವ ಆರೋಪಗಳನ್ನು ತಾತ್ವಿಕವಾಗಿ ಕೊನೆಯವರೆಗೆ ತೆಗೆದುಕೊಂಡು ಹೋಗಿದ್ದಾರೆಯೇ, ಸರಿಯಾದ ಸಮಯಕ್ಕೆ ದಾಖಲೆ ಬಿಡುಗಡೆ ಮಾಡಲಿ ನೋಡೋಣ, ನಾವು ಆಗ ಉತ್ತರ ಕೊಡುತ್ತೇವೆ ಎಂದರು.

ಅವರ ಕುಟುಂಬದವರೂ ರಾಜಕೀಯದಲ್ಲಿ ಇದ್ದಾರೆ: ಯತೀಂದ್ರ ಮಾಜಿ ಶಾಸಕರಾಗಿದ್ದವರು ನಮ್ಮ ಮನೆಯಲ್ಲಿ ಇರುತ್ತಾರೆ, ಹಾಗಾದರೆ ಕುಮಾರಸ್ವಾಮಿಯವರ ಮಗ, ಹೆಂಡತಿ, ಅವರ ಅಣ್ಣ ಎಲ್ಲರೂ ರಾಜಕೀಯದಲ್ಲಿ ಇಲ್ಲವೇ, ಅವರನ್ನು ಏನೂಂತ ಕರೆಯೋದು, ಕುಮಾರಸ್ವಾಮಿಯವರ ಆರೋಪಕ್ಕೆ ವಿಧಾನಸಭೆಯಲ್ಲಿ ಉತ್ತರ ಕೊಡುತ್ತೇನೆ ಎಂದು ತಿರುಗೇಟು ನೀಡಿದರು.

ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಕುರಿತು ವರದಿ ಕೇಳುತ್ತೇನೆ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಪ್ರತಿಕ್ರಿಯಿಸಿದ ಸಿಎಂ, ಈ ವಿಚಾರದ ಬಗ್ಗೆ ವಿವರ ಗೊತ್ತಿಲ್ಲ, ತಿಳಿದುಕೊಂಡು ಹೇಳುತ್ತೇನೆ ಎಂದರು.

ಜಗದೀಶ್ ಅವರ ಪತ್ನಿ ಪಂಚಾಯತ್ ಸದಸ್ಯೆ, ಇದರಲ್ಲಿ ರಾಜಕೀಯ ಇರಬಹುದು ಎಂದು ನನಗೆ ಅನಿಸುತ್ತದೆ, ಅವರನ್ನು ವರ್ಗಾವಣೆ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದು, ವರ್ಗಾವಣೆಗೆ ಆತ್ಮಹತ್ಯೆ ಯತ್ನಕ್ಕೆ ಸಚಿವ ಚಲುವರಾಯಸ್ವಾಮಿ ಕಾರಣ ಎಂದು ಕುಮಾರಸ್ವಾಮಿಯವರು ಆರೋಪ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿದೆ ಎಂದು ನನಗನಿಸುವುದಿಲ್ಲ. ಈ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದರು.

andolanait

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

4 seconds ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

2 mins ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

5 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

9 mins ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

14 mins ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

19 mins ago