BREAKING NEWS

ಮುಖ್ಯಮಂತ್ರಿ ಶರ್ಮರನ್ನ ನನ್ನ ಮನೆಗೆ ಊಟಕ್ಕೆ ಆಹ್ವಾನಿಸುವೆ : ಕೇಜ್ರಿವಾಲ್

ಗುವಾಹಟಿ: ‘ಚಹಾಕೂಟ, ಊಟಕ್ಕಾಗಿ ಹಿಮಂತ ಬಿಸ್ವ ಶರ್ಮ ಅವರನ್ನು ನವದೆಹಲಿಯ ನನ್ನ ಮನೆಗೆ ಆಹ್ವಾನಿಸುತ್ತೇನೆ. ಆದರೆ, ಬೆದರಿಕೆ ಒಡ್ಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವ ಶರ್ಮ ಅವರಿಗೆ ಶೋಭೆ ತರುವುದಿಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭಾನುವಾರ ಹೇಳಿದರು.

ಅಸ್ಸಾಂ ಜನರು ಒಳ್ಳೆಯವರು. ಇಲ್ಲಿನ ಜನರು ಅತಿಥಿಗಳನ್ನು ಸ್ವಾಗತಿಸುತ್ತಾರೆ. ಹಿಮಂತ ಬಿಸ್ವ ಶರ್ಮ ಅವರು ಇಲ್ಲಿನ ಜನರನ್ನು ನೋಡಿ ಕಲಿಯಬೇಕು’ ಎಂದು ಇಲ್ಲಿನ ಲೋಕಪ್ರಿಯ ಗೋಪಿನಾಥ ಬೋರ್ದೊಲೋಯಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಕೇಜ್ರಿವಾಲ್‌ ಹೇಳಿದರು.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ್ದ ಕೇಜ್ರಿವಾಲ್, ‘ಶರ್ಮ ವಿರುದ್ಧ ಹಲವಾರು ಪ್ರಕರಣಗಳಿವೆ’ ಎಂದು  ಹೇಳಿದ್ದರು ಎನ್ನಲಾಗಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದ ಶರ್ಮ, ‘ವಿಧಾನಸಭೆ ಹೊರಗಡೆ ಮಾತನಾಡಿ, ನನ್ನ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದರೆ ಕೇಜ್ರಿವಾಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ’ ಎಂದು ಶುಕ್ರವಾರ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರಿಂದ ಇಂಥ ಹೇಳಿಕೆ ಹೊರಬಿದ್ದಿದೆ.‘ದೇಶದ ಯಾವುದಾದರೂ ಠಾಣೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆಯಾ’ ಎಂದು ಶರ್ಮ ಪ್ರಶ್ನಿಸಿದ್ದರು.

‘ನನ್ನ ವಿರುದ್ಧ ಆರೋಪ ಮಾಡಿದ ಕೇಜ್ರಿವಾಲ್ ವಿರುದ್ಧ ಮೊಕದ್ದಮೆ ಹೂಡಲು ಬಯಸಿದ್ದೆ. ಆದರೆ, ಆತ ಒಬ್ಬ ಹೇಡಿ. ವಿಧಾನಸಭೆಯಲ್ಲಿ ಮಾತನಾಡಿ ನನ್ನ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ’ ಎಂದು ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದಿದ್ದರು.

‘ಕೇಜ್ರಿವಾಲ್‌ ಅವರು ಏಪ್ರಿಲ್‌ 2ರಂದು ಅಸ್ಸಾಂಗೆ ಬಂದು, ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲಿ. ಸಿಸೋಡಿಯಾ ವಿರುದ್ಧ ಹೂಡಿರುವಂತೆ, ಮರುದಿನವೇ ಕೇಜ್ರಿವಾಲ್ ವಿರುದ್ಧವೂ ಮಾನನಷ್ಟ ಮೊಕದ್ದಮೆ ದಾಖಲಿಸುವೆ’ ಎಂದೂ ಹೇಳಿದ್ದರು.

 

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

55 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

59 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago