BREAKING NEWS

ಗುತ್ತಿಗೆ ವ್ಯವಹಾರದ ಅವ್ಯವಹಾರಗಳ ದಾಖಲೆ ಸ್ವಾತಂತ್ರ್ಯ ದಿನಾಚರಣೆ ಬಳಿಕ ಬಿಡುಗಡೆ ಮಾಡುತ್ತೇನೆ: ಡಿಕೆ ಶಿವಕುಮಾರ್‌

ಬೆಂಗಳೂರು : ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ವ್ಯವಹಾರಗಳಲ್ಲಿ ಏನೆಲ್ಲಾ ಅವ್ಯವಹಾರಗಳಾಗಿವೆ, ಯಾವ ರೀತಿ ತಪ್ಪು ದಾರಿಗೆಳೆಯಲಾಗಿದೆ ಎಂಬ ಮಾಹಿತಿ ಮತ್ತು ದಾಖಲೆಗಳನ್ನು ಸ್ವತಂತ್ರ್ಯ ದಿನಾಚರಣೆಯ ಬಳಿಕ ಬಿಡುಗಡೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ವಿಷಯದಲ್ಲಿ ನನಗೆ ವಿಷಾದವಿದೆ. ಅವರನ್ನು ಯಾವ ರೀತಿ ತಪ್ಪು ದಾರಿಗೆಳೆಯಲಾಗಿದೆ, ದುರುಪಯೋಗ ಪಡಿಸಿಕೊಳ್ಳಲಾಗಿದೆ, ಯಾವ ರೀತಿ ಅವರಿಂದ ಹಣ ಸಂಗ್ರಹಿಸಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದರು.

ಕಳೆದ ಎರಡು ದಿನಗಳ ಹಿಂದೆಯೇ ತಾವು ಈ ವಿಚಾರ ಕುರಿತು ಮಾತನಾಡಬೇಕಿತ್ತು. ಬಿಬಿಎಂಪಿಯಲ್ಲಿ ಬೆಂಕಿ ಅನಾಹುತವಾದ್ದರಿಂದ ಆ ಸಂದರ್ಭ ಬೇಡ ಎಂದು ಸುಮ್ಮನಾಗಿದ್ದೆ. ಇಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಸಭೆ ಇದೆ. ಹೀಗಾಗಿ ಈ ದಿನವೂ ಮಾತನಾಡುವುದಿಲ್ಲ. ಸ್ವತಂತ್ರ್ಯ ದಿನಾಚರಣೆ ಬಳಿಕ ಮಾತನಾಡುತ್ತೇನೆ. ಆ ವೇಳೆ ಆಘಾತಕಾರಿ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದರು.

ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಅಶ್ವತ್ಥ ನಾರಾಯಣ ಸಾಹೇಬ್ರು ನವರಂಗಿ ನಾರಾಯಣ, ಕಳ್ಳರನ್ನು ರಕ್ಷಣೆ ಮಾಡುವ ವಿಚಾರದಲ್ಲಿ ಅವರಿಗೆ ಡಾಕ್ಟರೇಟ್ ನೀಡಬೇಕು, ರಾಮನಗರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು ಕಸ ಗುಡಿಸುತ್ತೇನೆ ಎಂದಿದ್ದರು. ಆದರೆ ಕೊನೆಗೆ ಅವರ ಪಕ್ಷವನ್ನೇ ಕ್ಲೀನ್ ಮಾಡಿ ಹೋದರು. ಪಾಪ ಆ ಮೆಂಟಲ್ ಟೆನ್ಶನ್‍ನಲ್ಲಿ ಅವರಿದ್ದಾರೆ ಎಂದು ಲೇವಡಿ ಮಾಡಿದರು.

ಬೆಂಗಳೂರು ನಗರದಲ್ಲಿ ಅಶ್ವತ್ಥ ನಾರಾಯಣ ಈ ಹಿಂದೆ ಸಚಿವರಾಗಿ ನಿಭಾಯಿಸುತ್ತಿದ್ದ ಎರಡು ಇಲಾಖೆಗಳಲ್ಲಿ ಏನೇನು ಮಾಡಿದ್ದಾರೆ ಎಂಬುದನ್ನು ನಾವಿನ್ನೂ ಬಿಚ್ಚಿಲ್ಲ. ಸಮಯ ಬರುತ್ತದೆ. ಯಾರನ್ನು ಎತ್ತಿ ಕಟ್ಟುತ್ತಿದ್ದಾರೆ, ಏನೆಲ್ಲಾ ಸಂಚು ಮಾಡುತ್ತಿದ್ದಾರೆ, ಗುತ್ತಿಗೆದಾರರನ್ನು ಹೇಗೆಲ್ಲಾ ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ ಎಂದರು.

ನೈಜವಾಗಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ನ್ಯಾಯ ಸಿಗಲಿದೆ. ಗುತ್ತಿಗೆ ಕಾಮಗಾರಿಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ನಾವು ಈ ಮೊದಲು ಹೇಳಿದ್ದೆವು. ಅದರಂತೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತದೆ. ಇದಕ್ಕಾಗಿ ಏನೇನು ಆಟವಾಡುತ್ತಿದ್ದಾರೆ, ಎಲ್ಲೆಲ್ಲಿ ಹೋಗುತ್ತಿದ್ದಾರೆ, ಯಾವೆಲ್ಲಾ ಅಭಿಯಾನ ಮಾಡುತ್ತಿದ್ದಾರೆ ಎಂಬುದನ್ನು ನೋಡುತ್ತಿದ್ದೇವೆ ಎಂದು ಹೇಳಿದರು.

ಗುತ್ತಿಗೆದಾರರ ಮೇಲೆ ಒತ್ತಡ ಹೇರಿ ತನ್ನ ವಿರುದ್ಧ ಆರೋಪ ಮಾಡಿಸಲಾಗಿದೆ. ನಾನು ಈವರೆಗೂ ಯಾವುದೇ ಕಾಮಗಾರಿಗಳನ್ನು ಗುತ್ತಿಗೆ ನೀಡಿಲ್ಲ. ಈ ಹಿಂದೆ ನಡೆದಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರರು ತಮ್ಮನ್ನು ಭೇಟಿ ಮಾಡಿದ್ದರು. ಅವರು ಕೆಲಸ ಮಾಡಿದ್ದರೆ ಬಿಲ್ ಪಾವತಿ ಮಾಡಲೇಬೇಕಾದ ಬದ್ಧತೆ ಮತ್ತು ಜವಾಬ್ದಾರಿ ಸರ್ಕಾರಕ್ಕಿದೆ.

ಆದರೆ ಅದಕ್ಕೂ ಮೊದಲು ನೈಜತೆಯ ತನಿಖೆ ಆಗಬೇಕು. ಈ ಹಂತದಲ್ಲಿ ತೊಂದರೆಯಾಗುತ್ತಿರುವುದಕ್ಕೆ ಗುತ್ತಿಗೆದಾರರಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ಕಮಿಷನ್ ಪಡೆದಿಲ್ಲ ಎಂದಾದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲು ಭಯವೇಕೆ ಎಂದು ಮಾಜಿ ಸಚಿವ ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಪಾಪ ಅವರೂ ಕೂಡ ಮೆಂಟಲ್ ಟೆನ್ಶನ್‍ನಲ್ಲಿದ್ದಾರೆ. ಅವರಿಗೂ ಚಿಕಿತ್ಸೆಯ ಅಗತ್ಯವಿದೆ, ಕೊಡೋಣ ಎಂದರು.

andolanait

Recent Posts

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

1 hour ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

12 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

15 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

16 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

17 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

17 hours ago