Siddaramaiah. Photo: PTI
ಮೈಸೂರು: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಂಗಳವಾರ (ಏ.2) ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಕೂಲ್ ಆಗಿದ್ದೇನೆ ಅದಕ್ಕಾಗಿಯೇ ನನಗೆ ಯಾವುದೇ ಟೆನ್ಷನ್ ಇಲ್ಲ. ಇದು ಕೂಡಾ ನನ್ನ ಆರೋಗ್ಯದ ಒಂದು ಗುಟ್ಟು. ಜನರು ಪ್ರೀತಿಯಿಂದ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಾನು ನಿವೃತ್ತಿ ಹೊಂದುವುದಾಗಿ ತೀರ್ಮಾನಿಸಿದ್ದೇನೆ. ಮುಂದಿನ ನಾಲ್ಕು ವರ್ಷಕ್ಕೆ ನನಗೆ 83 ವರ್ಷ ವಯಸ್ಸಾಗಲಿದೆ. ಆನಂತರ ರಾಜಕೀಯದಲ್ಲಿ ಉತ್ಸಾಹ ಇರುವುದಿಲ್ಲ. ಜೊತೆಗೆ ನನ್ನ ದೇಹದ ಸ್ಥಿತಿ ಹೇಗಿರುತ್ತದೆ ಎಂಬುದು ನನಗೆ ಮಾತ್ರ ಗೊತ್ತಿದ್ದು, ಈ ಎಲ್ಲಾ ಕಾರಣದಿಂದಾಗಿ ರಾಜಕೀಯದಿಂದ ನಿವೃತ್ತಿ ಹೊಂದಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಜ್ಯ ರಾಜಧಾನಿಯಲ್ಲಿ ಬರಗಾಲದಿಂದಾಗಿ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಯಾವ ಹಣದ ಸಮಸ್ಯೆ ಇಲ್ಲ. ಒಂದೆರಡು ಕಡೆ ಸಮಸ್ಯೆ ಇದ್ದರು ಅದನ್ನು ಬಗೆ ಹರಿಸುವಂತೆ ಹೇಳಿದ್ದೇನೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸಂಬಂಧ ಅಧಿಕಾರಿಗಳ ಸಭೆ ನಡೆಸಲು ಸಾಧ್ಯವಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…