BREAKING NEWS

ತೃತೀಯ ಲಿಂಗಿಗಳನ್ನು ಕ್ರಿಕೆಟ್‌ನಿಂದ ಬ್ಯಾನ್‌ ಮಾಡಿದ ಐಸಿಸಿ; ನಿವೃತ್ತಿ ಘೋಷಿಸಿದ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್‌

ನಿನ್ನೆ ( ನವೆಂಬರ್‌ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಬೃಹತ್‌ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್‌ಗಳಿಗೆ ಹಿನ್ನಡೆ ಉಂಟಾಗಿದೆ.

ತೃತೀಯ ಲಿಂಗಿ ಕ್ರಿಕೆಟರ್‌ಗಳು ಲಿಂಗ ಪರಿವರ್ತನೆ ಮಾಡಿಸಿಕೊಂಡಿರಲಿ, ಲಿಂಗ ಮರುಜೋಡಣೆ ಮಾಡಿಸಿಕೊಂಡಿರಲಿ ಅಥವಾ ಇದ್ಯಾವುದನ್ನೂ ಮಾಡಿಸಿಕೊಳ್ಳದೇ ಇರಲಿ, ಹೇಗಿದ್ದರೂ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾಗವಹಿಸುವಂತಿಲ್ಲ ಎಂಬ ಹೊಸ ನಿಯಮ ಇದೀಗ ಜಾರಿಗೆ ಬಂದಿದೆ. ಮಹಿಳಾ ಕ್ರಿಕೆಟಿಗರ ಸಮಗ್ರತೆ ಕಾಪಾಡಲು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿಯಮ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಾತ್ರ ಅನ್ವಯಿಸಲಿದ್ದು, ದೇಶಿ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳನ್ನು ಮಹಿಳಾ ಕ್ರಿಕೆಟ್‌ ಆಡಲು ಬಿಡುವುದು ಆಯಾ ಕ್ರಿಕೆಟ್‌ ಮಂಡಳಿಗಳಿಗೆ ಬಿಟ್ಟ ವಿಚಾರ ಎಂದು ಐಸಿಸಿ ಹೇಳಿದೆ.

ಹೀಗೆ ಐಸಿಸಿ ಹೊಸ ನಿಯಮ ಜಾರಿಗೊಳಿಸುತ್ತಿದ್ದಂತೆ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್‌ ಡೇನಿಯಲ್‌ ಮೆಕ್‌ಗಾಹೆ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಮೆಕ್‌ಗಾಹೆ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಕೆನಡಾ ದೇಶದ ಪರ ಆಡುತ್ತಿದ್ದರು.

ಇನ್ನು ಐಸಿಸಿಯ ಈ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಇದನ್ನು ಒಳ್ಳೆಯ ನಿರ್ಧಾರ ಎಂದು ಸ್ವಾಗತಿಸಿದ್ದಾರೆ. ಪುರುಷರ ಹಾಗೆ ಬಲ ಹೊಂದಿರುವ ತೃತೀಯ ಲಿಂಗಿಗಳು ಮಹಿಳಾ ಕ್ರಿಕೆಟ್‌ನಲ್ಲಿ ಆಡುವುದು ಉಳಿದ ಮಹಿಳಾ ಕ್ರಿಕೆಟರ್‌ಗಳಿಗೆ ಅನನುಕೂಲ ಉಂಟು ಮಾಡುವುದು ಖಚಿತ, ಹೀಗಾಗಿ ಇದು ಐಸಿಸಿಯ ಉತ್ತಮ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್‌ ಮಾಡಿದ್ದಾರೆ.

andolana

Recent Posts

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

21 mins ago

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…

27 mins ago

ಮಂಡ್ಯ| ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ‌: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…

1 hour ago

ಬಜೆಟ್‌ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ತುಂಬಲಿದೆ: ಪ್ರಧಾನಿ ಮೋದಿ

ನವದೆಹಲಿ: 2026ರ ಬಜೆಟ್‌ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 hours ago

ಕೇಂದ್ರ ಬಜೆಟ್:‌ ಯಾವ ವಸ್ತುಗಳ ದರ ಏರಿಕೆ? ಯಾವುದು ಇಳಿಕೆ?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್‌ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…

2 hours ago