ನಿನ್ನೆ ( ನವೆಂಬರ್ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಸಂಬಂಧಿಸಿದಂತೆ ಬೃಹತ್ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್ಗಳಿಗೆ ಹಿನ್ನಡೆ ಉಂಟಾಗಿದೆ.
ತೃತೀಯ ಲಿಂಗಿ ಕ್ರಿಕೆಟರ್ಗಳು ಲಿಂಗ ಪರಿವರ್ತನೆ ಮಾಡಿಸಿಕೊಂಡಿರಲಿ, ಲಿಂಗ ಮರುಜೋಡಣೆ ಮಾಡಿಸಿಕೊಂಡಿರಲಿ ಅಥವಾ ಇದ್ಯಾವುದನ್ನೂ ಮಾಡಿಸಿಕೊಳ್ಳದೇ ಇರಲಿ, ಹೇಗಿದ್ದರೂ ಅವರು ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾಗವಹಿಸುವಂತಿಲ್ಲ ಎಂಬ ಹೊಸ ನಿಯಮ ಇದೀಗ ಜಾರಿಗೆ ಬಂದಿದೆ. ಮಹಿಳಾ ಕ್ರಿಕೆಟಿಗರ ಸಮಗ್ರತೆ ಕಾಪಾಡಲು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿಯಮ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಮಾತ್ರ ಅನ್ವಯಿಸಲಿದ್ದು, ದೇಶಿ ಮಟ್ಟದ ಕ್ರಿಕೆಟ್ನಲ್ಲಿ ತೃತೀಯ ಲಿಂಗಿಗಳನ್ನು ಮಹಿಳಾ ಕ್ರಿಕೆಟ್ ಆಡಲು ಬಿಡುವುದು ಆಯಾ ಕ್ರಿಕೆಟ್ ಮಂಡಳಿಗಳಿಗೆ ಬಿಟ್ಟ ವಿಚಾರ ಎಂದು ಐಸಿಸಿ ಹೇಳಿದೆ.
ಹೀಗೆ ಐಸಿಸಿ ಹೊಸ ನಿಯಮ ಜಾರಿಗೊಳಿಸುತ್ತಿದ್ದಂತೆ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್ ಡೇನಿಯಲ್ ಮೆಕ್ಗಾಹೆ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಮೆಕ್ಗಾಹೆ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್ನಲ್ಲಿ ಕೆನಡಾ ದೇಶದ ಪರ ಆಡುತ್ತಿದ್ದರು.
ಇನ್ನು ಐಸಿಸಿಯ ಈ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಇದನ್ನು ಒಳ್ಳೆಯ ನಿರ್ಧಾರ ಎಂದು ಸ್ವಾಗತಿಸಿದ್ದಾರೆ. ಪುರುಷರ ಹಾಗೆ ಬಲ ಹೊಂದಿರುವ ತೃತೀಯ ಲಿಂಗಿಗಳು ಮಹಿಳಾ ಕ್ರಿಕೆಟ್ನಲ್ಲಿ ಆಡುವುದು ಉಳಿದ ಮಹಿಳಾ ಕ್ರಿಕೆಟರ್ಗಳಿಗೆ ಅನನುಕೂಲ ಉಂಟು ಮಾಡುವುದು ಖಚಿತ, ಹೀಗಾಗಿ ಇದು ಐಸಿಸಿಯ ಉತ್ತಮ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…