BREAKING NEWS

ತೃತೀಯ ಲಿಂಗಿಗಳನ್ನು ಕ್ರಿಕೆಟ್‌ನಿಂದ ಬ್ಯಾನ್‌ ಮಾಡಿದ ಐಸಿಸಿ; ನಿವೃತ್ತಿ ಘೋಷಿಸಿದ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್‌

ನಿನ್ನೆ ( ನವೆಂಬರ್‌ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಬೃಹತ್‌ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್‌ಗಳಿಗೆ ಹಿನ್ನಡೆ ಉಂಟಾಗಿದೆ.

ತೃತೀಯ ಲಿಂಗಿ ಕ್ರಿಕೆಟರ್‌ಗಳು ಲಿಂಗ ಪರಿವರ್ತನೆ ಮಾಡಿಸಿಕೊಂಡಿರಲಿ, ಲಿಂಗ ಮರುಜೋಡಣೆ ಮಾಡಿಸಿಕೊಂಡಿರಲಿ ಅಥವಾ ಇದ್ಯಾವುದನ್ನೂ ಮಾಡಿಸಿಕೊಳ್ಳದೇ ಇರಲಿ, ಹೇಗಿದ್ದರೂ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾಗವಹಿಸುವಂತಿಲ್ಲ ಎಂಬ ಹೊಸ ನಿಯಮ ಇದೀಗ ಜಾರಿಗೆ ಬಂದಿದೆ. ಮಹಿಳಾ ಕ್ರಿಕೆಟಿಗರ ಸಮಗ್ರತೆ ಕಾಪಾಡಲು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿಯಮ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಾತ್ರ ಅನ್ವಯಿಸಲಿದ್ದು, ದೇಶಿ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳನ್ನು ಮಹಿಳಾ ಕ್ರಿಕೆಟ್‌ ಆಡಲು ಬಿಡುವುದು ಆಯಾ ಕ್ರಿಕೆಟ್‌ ಮಂಡಳಿಗಳಿಗೆ ಬಿಟ್ಟ ವಿಚಾರ ಎಂದು ಐಸಿಸಿ ಹೇಳಿದೆ.

ಹೀಗೆ ಐಸಿಸಿ ಹೊಸ ನಿಯಮ ಜಾರಿಗೊಳಿಸುತ್ತಿದ್ದಂತೆ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್‌ ಡೇನಿಯಲ್‌ ಮೆಕ್‌ಗಾಹೆ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಮೆಕ್‌ಗಾಹೆ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಕೆನಡಾ ದೇಶದ ಪರ ಆಡುತ್ತಿದ್ದರು.

ಇನ್ನು ಐಸಿಸಿಯ ಈ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಇದನ್ನು ಒಳ್ಳೆಯ ನಿರ್ಧಾರ ಎಂದು ಸ್ವಾಗತಿಸಿದ್ದಾರೆ. ಪುರುಷರ ಹಾಗೆ ಬಲ ಹೊಂದಿರುವ ತೃತೀಯ ಲಿಂಗಿಗಳು ಮಹಿಳಾ ಕ್ರಿಕೆಟ್‌ನಲ್ಲಿ ಆಡುವುದು ಉಳಿದ ಮಹಿಳಾ ಕ್ರಿಕೆಟರ್‌ಗಳಿಗೆ ಅನನುಕೂಲ ಉಂಟು ಮಾಡುವುದು ಖಚಿತ, ಹೀಗಾಗಿ ಇದು ಐಸಿಸಿಯ ಉತ್ತಮ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್‌ ಮಾಡಿದ್ದಾರೆ.

andolana

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

2 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

2 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

2 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

3 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

5 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

6 hours ago