BREAKING NEWS

ತೃತೀಯ ಲಿಂಗಿಗಳನ್ನು ಕ್ರಿಕೆಟ್‌ನಿಂದ ಬ್ಯಾನ್‌ ಮಾಡಿದ ಐಸಿಸಿ; ನಿವೃತ್ತಿ ಘೋಷಿಸಿದ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್‌

ನಿನ್ನೆ ( ನವೆಂಬರ್‌ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಬೃಹತ್‌ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್‌ಗಳಿಗೆ ಹಿನ್ನಡೆ ಉಂಟಾಗಿದೆ.

ತೃತೀಯ ಲಿಂಗಿ ಕ್ರಿಕೆಟರ್‌ಗಳು ಲಿಂಗ ಪರಿವರ್ತನೆ ಮಾಡಿಸಿಕೊಂಡಿರಲಿ, ಲಿಂಗ ಮರುಜೋಡಣೆ ಮಾಡಿಸಿಕೊಂಡಿರಲಿ ಅಥವಾ ಇದ್ಯಾವುದನ್ನೂ ಮಾಡಿಸಿಕೊಳ್ಳದೇ ಇರಲಿ, ಹೇಗಿದ್ದರೂ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾಗವಹಿಸುವಂತಿಲ್ಲ ಎಂಬ ಹೊಸ ನಿಯಮ ಇದೀಗ ಜಾರಿಗೆ ಬಂದಿದೆ. ಮಹಿಳಾ ಕ್ರಿಕೆಟಿಗರ ಸಮಗ್ರತೆ ಕಾಪಾಡಲು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಿಯಮ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಾತ್ರ ಅನ್ವಯಿಸಲಿದ್ದು, ದೇಶಿ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳನ್ನು ಮಹಿಳಾ ಕ್ರಿಕೆಟ್‌ ಆಡಲು ಬಿಡುವುದು ಆಯಾ ಕ್ರಿಕೆಟ್‌ ಮಂಡಳಿಗಳಿಗೆ ಬಿಟ್ಟ ವಿಚಾರ ಎಂದು ಐಸಿಸಿ ಹೇಳಿದೆ.

ಹೀಗೆ ಐಸಿಸಿ ಹೊಸ ನಿಯಮ ಜಾರಿಗೊಳಿಸುತ್ತಿದ್ದಂತೆ ಜಗತ್ತಿನ ಮೊದಲ ತೃತೀಯ ಲಿಂಗಿ ಕ್ರಿಕೆಟರ್‌ ಡೇನಿಯಲ್‌ ಮೆಕ್‌ಗಾಹೆ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಮೆಕ್‌ಗಾಹೆ ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಕೆನಡಾ ದೇಶದ ಪರ ಆಡುತ್ತಿದ್ದರು.

ಇನ್ನು ಐಸಿಸಿಯ ಈ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ನೆಟ್ಟಿಗರು ಇದನ್ನು ಒಳ್ಳೆಯ ನಿರ್ಧಾರ ಎಂದು ಸ್ವಾಗತಿಸಿದ್ದಾರೆ. ಪುರುಷರ ಹಾಗೆ ಬಲ ಹೊಂದಿರುವ ತೃತೀಯ ಲಿಂಗಿಗಳು ಮಹಿಳಾ ಕ್ರಿಕೆಟ್‌ನಲ್ಲಿ ಆಡುವುದು ಉಳಿದ ಮಹಿಳಾ ಕ್ರಿಕೆಟರ್‌ಗಳಿಗೆ ಅನನುಕೂಲ ಉಂಟು ಮಾಡುವುದು ಖಚಿತ, ಹೀಗಾಗಿ ಇದು ಐಸಿಸಿಯ ಉತ್ತಮ ನಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್‌ ಮಾಡಿದ್ದಾರೆ.

andolana

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

9 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

10 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

10 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

10 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

10 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago