BREAKING NEWS

ಐಸಿಸಿ ಮಹಿಳಾ ರ್ಯಾಂಕಿಂಗ್‌: ಏಕದಿನ ಮಾದರಿಯಲ್ಲಿ ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ ಬ್ಯಾಟ್ಸ್‌ಮನ್ ಹರ್ಮನ್‌ಪ್ರೀತ್ 716 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ಸ್ಮೃತಿ ಅವರಿಗಿಂತ ಎರಡು ಅಂಕ ಕಡಿಮೆ ಹೊಂದಿದ್ದಾರೆ.

ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಟಪಟ್ಟು 758 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಈ ಸಾಧನೆ ಮಾಡಿದ ದೇಶದ ಮೊದಲ ಮಹಿಳಾ ಆಟಗಾರ್ತಿ. ಬೌಲಿಂಗ್ ವಿಭಾಗದಲ್ಲಿ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ (617 ಅಂಕ) ಮತ್ತು ಹಿರಿಯ ಆಫ್ ಸ್ಪಿನ್ನರ್ ದೀಪ್ತಿ ಶರ್ಮಾ ಕ್ರಮವಾಗಿ ಎಂಟು ಮತ್ತು 10 ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ 751 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಭಾರತದ ದೀಪ್ತಿ 322 ಅಂಕಗಳೊಂದಿಗೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಸ್ಮೃತಿ 722 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದೀಪ್ತಿ ಬೌಲಿಂಗ್ ಪಟ್ಟಿಯಲ್ಲಿ 729 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ಒಂದು ಸ್ಥಾನ ಗಳಿಸಿದ್ದಾರೆ. ರೇಣುಕಾ 700 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆದರೆ, ದೀಪ್ತಿ 393 ಅಂಕಗಳೊಂದಿಗೆ ಆಲ್ ರೌಂಡರ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಏತನ್ಮಧ್ಯೆ, ಚಾಮರಿ ಮಹಿಳಾ ಏಕದಿನ ಆಟಗಾರ್ತಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ತಲುಪಿದ ಲಂಕಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ICC ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ, ನ್ಯೂಜಿಲೆಂಡ್ ವಿರುದ್ಧ ತನ್ನ ತಂಡದ 2-1 ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಈ ಮೂಲಕ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಸನತ್ ಜಯಸೂರ್ಯ ಅವರನ್ನು ಸರಿಸಮನಾಗಿ ಏಕದಿನ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದರು ಶ್ರೀಲಂಕಾದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜಯಸೂರ್ಯ ಸೆಪ್ಟೆಂಬರ್ 2002ರಿಂದ ಮೇ 2003ರವರೆಗೆ 181 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು.

ಚಾಮರಿ 758 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಇದು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶ್ರೀಲಂಕಾದ ಮಹಿಳಾ ಆಟಗಾರ್ತಿಯ ಗರಿಷ್ಠ ರೇಟಿಂಗ್ ಆಗಿದೆ. ಅವರ ನಂತರ 587 ಅಂಕಗಳನ್ನು ಗಳಿಸಿದ ದೇಬುನು ಸಿಲ್ವಾ ಅವರ ಸಂಖ್ಯೆ ಬರುತ್ತದೆ. ಅವರು ಏಪ್ರಿಲ್ 2010ರಲ್ಲಿ 11ನೇ ಸ್ಥಾನವನ್ನು ಪಡೆದರು, ಇದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶ್ರೀಲಂಕಾದ ಆಟಗಾರ್ತಿಯ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ.

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

4 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

4 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

4 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

4 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

6 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

6 hours ago