BREAKING NEWS

ಐಸಿಸಿ ಮಹಿಳಾ ರ್ಯಾಂಕಿಂಗ್‌: ಏಕದಿನ ಮಾದರಿಯಲ್ಲಿ ಇತಿಹಾಸ ಸೃಷ್ಟಿಸಿದ ಲಂಕಾ ನಾಯಕಿ!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ ಇಂದು ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಉಪನಾಯಕಿ ಸ್ಮೃತಿ ಮಂಧಾನ ಅವರು ತಲಾ ಒಂದು ಸ್ಥಾನ ಕುಸಿದು ಆರು ಮತ್ತು ಏಳನೇ ಸ್ಥಾನದಲ್ಲಿದ್ದಾರೆ. ಆಕ್ರಮಣಕಾರಿ ಬ್ಯಾಟ್ಸ್‌ಮನ್ ಹರ್ಮನ್‌ಪ್ರೀತ್ 716 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದರೆ, ಸ್ಮೃತಿ ಅವರಿಗಿಂತ ಎರಡು ಅಂಕ ಕಡಿಮೆ ಹೊಂದಿದ್ದಾರೆ.

ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಟಪಟ್ಟು 758 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಈ ಸಾಧನೆ ಮಾಡಿದ ದೇಶದ ಮೊದಲ ಮಹಿಳಾ ಆಟಗಾರ್ತಿ. ಬೌಲಿಂಗ್ ವಿಭಾಗದಲ್ಲಿ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ (617 ಅಂಕ) ಮತ್ತು ಹಿರಿಯ ಆಫ್ ಸ್ಪಿನ್ನರ್ ದೀಪ್ತಿ ಶರ್ಮಾ ಕ್ರಮವಾಗಿ ಎಂಟು ಮತ್ತು 10 ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ 751 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಭಾರತದ ದೀಪ್ತಿ 322 ಅಂಕಗಳೊಂದಿಗೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ಸ್ಮೃತಿ 722 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದೀಪ್ತಿ ಬೌಲಿಂಗ್ ಪಟ್ಟಿಯಲ್ಲಿ 729 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ಒಂದು ಸ್ಥಾನ ಗಳಿಸಿದ್ದಾರೆ. ರೇಣುಕಾ 700 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಆದರೆ, ದೀಪ್ತಿ 393 ಅಂಕಗಳೊಂದಿಗೆ ಆಲ್ ರೌಂಡರ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಏತನ್ಮಧ್ಯೆ, ಚಾಮರಿ ಮಹಿಳಾ ಏಕದಿನ ಆಟಗಾರ್ತಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ತಲುಪಿದ ಲಂಕಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ICC ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ, ನ್ಯೂಜಿಲೆಂಡ್ ವಿರುದ್ಧ ತನ್ನ ತಂಡದ 2-1 ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಈ ಮೂಲಕ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಸನತ್ ಜಯಸೂರ್ಯ ಅವರನ್ನು ಸರಿಸಮನಾಗಿ ಏಕದಿನ ಪುರುಷರ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದರು ಶ್ರೀಲಂಕಾದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜಯಸೂರ್ಯ ಸೆಪ್ಟೆಂಬರ್ 2002ರಿಂದ ಮೇ 2003ರವರೆಗೆ 181 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದರು.

ಚಾಮರಿ 758 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಇದು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶ್ರೀಲಂಕಾದ ಮಹಿಳಾ ಆಟಗಾರ್ತಿಯ ಗರಿಷ್ಠ ರೇಟಿಂಗ್ ಆಗಿದೆ. ಅವರ ನಂತರ 587 ಅಂಕಗಳನ್ನು ಗಳಿಸಿದ ದೇಬುನು ಸಿಲ್ವಾ ಅವರ ಸಂಖ್ಯೆ ಬರುತ್ತದೆ. ಅವರು ಏಪ್ರಿಲ್ 2010ರಲ್ಲಿ 11ನೇ ಸ್ಥಾನವನ್ನು ಪಡೆದರು, ಇದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಶ್ರೀಲಂಕಾದ ಆಟಗಾರ್ತಿಯ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago