BREAKING NEWS

ಪ್ರಾರ್ಥನಾ ಮಂದಿರದಲ್ಲಿ ನಡೆದಿರೋದು ಐಇಡಿ ಬ್ಲಾಸ್ಟ್ : ದೃಢಪಡಿಸಿದ ಪೊಲೀಸರು

ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಯೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.

ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ.

ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್‍ಎಸ್‍ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್‍ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

lokesh

Recent Posts

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

14 mins ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

27 mins ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

1 hour ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

2 hours ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

2 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago