ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಯೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.
ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ.
ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್ಎಸ್ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…