ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಘಟನೆಯ ಬಳಿಕ ತನಿಖೆಯ ನೇತೃತ್ವ ವಹಿಸಲು ಒಟ್ಟು 8 ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇರುವ ಶಂಕೆ ದಟ್ಟವಾಗಿದೆ. ಕೇರಳ ಪೊಲೀಸ್ ಮಹಾನಿರ್ದೇಶಕ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಲು ಕಲಮಶ್ಯೇರಿಗೆ ತೆರಳಿದ್ದಾರೆ. ಎಲ್ಲಾ ಆಯಾಮಗಳಿಂದಲೂ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತದೆ ಎಂದು ಎಡಿಜಿಪಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೂ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.
ಶಂಕಿತರ ಸಾಮಾಜಿಕ ಜಾಲತಾಣಗಳ ಚಟುವಟಿಕೆ ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಜೊತೆಗೆ ಈ ಸ್ಫೋಟ ಪೂರ್ವ ನಿಯೋಜಿತ ಕೃತ್ಯವೇ ಎಂಬುದನ್ನು ಖಚಿತಪಡಿಸಲು ರಾಜ್ಯ ಅಥವಾ ಕೇಂದ್ರ ಸಂಸ್ಥೆಗಳಿಗೆ ಯಾವುದೇ ವರದಿಗಳು ಬಂದಿಲ್ಲ ಎಂಬುದಾಗಿ ತಿಳಿದುಬಂದಿದೆ.
ಇತ್ತ ಗಾಯಾಳುಗಳ ಆರೋಗ್ಯ ವಿಚಾರಿದ ಬಳಿಕ ಜಿಲ್ಲಾಧಿಕಾರಿ ಎನ್ಎಸ್ಕೆ ಉಮೇಶ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, 10 ಜನರನ್ನು ಕಲಮಶ್ಶೇರಿ ವೈದ್ಯಕೀಯ ಕಾಲೇಜಿನ ಸುಟ್ಟಗಾಯಗಳ ಘಟಕಕ್ಕೆ ದಾಖಲಿಸಲಾಗಿದೆ. ಅವರಲ್ಲಿ 50 ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿರುವ ಇಬ್ಬರನ್ನು ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು 8 ಜನರನ್ನು ವೈದ್ಯಕೀಯ ಕಾಲೇಜಿನ ಸಾಮಾನ್ಯ ವಾರ್ಡ್ನಲ್ಲಿ ದಾಖಲಿಸಲಾಗಿದ್ದು, ಉಳಿದ 18 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…