ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.
ಈ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು ಎಂದು ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು ಎಂದು ತಿಳಿಸಿದ್ದಾರೆ.
ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…