BREAKING NEWS

ಅಂಬೇಡ್ಕರರ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಕುರಿ ಮೇಯಿಸುತ್ತಿದ್ದೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.

ಈ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು ಎಂದು ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು ಎಂದು ತಿಳಿಸಿದ್ದಾರೆ.
ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago