BREAKING NEWS

ಅಂಬೇಡ್ಕರರ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಕುರಿ ಮೇಯಿಸುತ್ತಿದ್ದೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.

ಈ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ಮತ್ತೆ ಮತ್ತೆ ಹೇಳುತ್ತೇನೆ, ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ. ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು ಎಂದು ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು ಎಂದು ತಿಳಿಸಿದ್ದಾರೆ.
ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago