BREAKING NEWS

ಬಿಜೆಪಿಯವರು ಮಸೀದಿಗಳಲ್ಲಿ ದೇಗುಲ ಹುಡುಕಿದರೆ, ಜನರು ಪ್ರತಿ ದೇವಾಲಯದಲ್ಲಿ ಬೌದ್ಧ ವಿಹಾರ ಹುಡುಕುತ್ತಾರೆ: ಸ್ವಾಮಿ ಪ್ರಸಾದ್ ಮೌರ್ಯ

ಲಕ್ನೋ : ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ ಜನರು ಪ್ರತಿ ದೇವಾಲಯದಲ್ಲಿ ಬೌದ್ಧ ಮಠವನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು  ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.

ಉತ್ತರಾಖಂಡದ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳು, ಪುರಿಯ ಜಗನ್ನಾಥ ದೇವಾಲಯ, ಕೇರಳದ ಅಯ್ಯಪ್ಪ ದೇವಾಲಯ ಮತ್ತು ಪಂಢರಪುರ (ಮಹಾರಾಷ್ಟ್ರ) ವಿಠ್ಠಲ ದೇವಾಲಯಗಳು ಬೌದ್ಧ ವಿಹಾರಗಳಾಗಿವೆ. ಈ ಬೌದ್ಧ ವಿಹಾರಗಳನ್ನು ಕೆಡವಲಾಯಿತು ಮತ್ತು ನಂತರ ಹಿಂದೂ ಧಾರ್ಮಿಕ ದೇವಾಲಯಗಳು ಅಲ್ಲಿಗೆ ಬಂದವು ಎಂದಿದ್ದಾರೆ. ಎಂಟನೇ ಶತಮಾನದವರೆಗೂ ಅವುಗಳು ಬೌದ್ಧ ವಿಹಾರಗಳಾಗಿದ್ದವು’ಎಂದು ಅವರು ಹೇಳಿದ್ದಾರೆ.

ಈ ಎಲ್ಲಾ ದೇವಾಲಯಗಳು ಬೌದ್ಧ ಮಠಗಳಾಗಿದ್ದವು ಎಂಬುದಕ್ಕೆ ಸಾಕಷ್ಟು ಐತಿಹಾಸಿಕ ಪುರಾವೆಗಳಿವೆ ಎಂದು ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ. ಈ ದೇವಾಲಯಗಳನ್ನು ಬೌದ್ಧ ಮಠಗಳಾಗಿ ಪರಿವರ್ತಿಸುವುದು ಅವರ ಉದ್ದೇಶವಲ್ಲ ಎಂದು ಅವರು ಹೇಳಿದರು.

ಆದರೆ, ನೀವು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ, ಪ್ರತಿ ದೇವಾಲಯದಲ್ಲಿ ಬೌದ್ಧ ಮಠವನ್ನು ಏಕೆ ಹುಡುಕಬಾರದು? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರು ಮಸೀದಿ-ಮಂದಿರದ ವಿಚಾರ ಎತ್ತುವ ಮೂಲಕ ಷಡ್ಯಂತ್ರ ಹೂಡುತ್ತಿದ್ದಾರೆ. ಅವರು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕುತ್ತಿದ್ದಾರೆ. ಇದಕ್ಕೆ ಅವರು ದುಬಾರಿ ಬೆಲೆ ತೆರಬೇಕಾಗುತ್ತದೆ ’ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ದೇವಾಲಯಗಳನ್ನು ಮತ್ತೆ ಬೌದ್ಧ ವಿಹಾರಗಳಾಗಿ ಪರಿವರ್ತಿಸುವುದು ನಮ್ಮ ಉದ್ದೇಶವಲ್ಲ. ಆದರೆ, ನೀವು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ, ಪ್ರತಿ ದೇವಾಲಯದಲ್ಲಿ ಬೌದ್ಧ ವಿಹಾರವನ್ನು ಏಕೆ ಹುಡುಕಬಾರದು? ಎಂದು ಅವರು ಪ್ರಶ್ನಿಸಿದ್ದಾರೆ.

ಮೌರ್ಯ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಭೂಪೇಂದ್ರ ಸಿಂಗ್ ಚೌಧರಿ, ‘ಸನಾತನ ಧರ್ಮವನ್ನು ಮತ್ತೆ ಮತ್ತೆ ಅವಮಾನಿಸುವುದು ಸಮಾಜವಾದಿ ಪಕ್ಷ ಮತ್ತು ಅದರ ನಾಯಕರ ಅಭ್ಯಾಸವಾಗಿದೆ’ಎಂದು ಕಿಡಿ ಕಾರಿದ್ದಾರೆ.

andolanait

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

2 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago