ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
“ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಹಾಡನ್ನು ನಾಡಗೀತೆಯಾಗಿ ಘೋಷಣೆ ಮಾಡಿದೆವು. ಈ ಹಾಡೇ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ನೀಡಿರುವ ಸಂದೇಶ.” “ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ಮತ್ತು ಮುಸ್ಲಿಂ ಇಬ್ಬರನ್ನೂ ಭೇಟಿ ಮಾಡಿ ಮಾತನಾಡಿದ್ದಾರೆ. ಅವರ ಸಮಸ್ಯೆ ಆಲಿಸಿದ್ದಾರೆ. ಯಾರು ತಪ್ಪು ಕೆಲಸ ಮಾಡಿದ್ದಾರೋ, ಅದನ್ನು ಖಂಡಿಸಿದ್ದಾರೆ, ಇಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯ ಬರುವುದೇ ಇಲ್ಲ. ಯಾರು ಕಾನೂನು ಮೀರಿ ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ನೀಡುವ ಕೆಲಸ ಮಾಡುತ್ತೇವೆ. ಆದರೆ ಬಿಜೆಪಿಯವರು ಪಟ್ಟಿ ಇಟ್ಟುಕೊಂಡು ಕೆಲವರ ಮನೆಗೆ ಹೋಗಿದ್ದಾರೆ ಎಂದು ಆರೋಪಿಸಿದ ಶಿವಕುಮಾರ್,ನಾವು ನಿಜವಾದ ಹಿಂದುಗಳು, ಬಿಜೆಪಿಯವರು ನಕಲಿ ಹಿಂದುಗಳು ಎನ್ನುವ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…