ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
“ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಹಾಡನ್ನು ನಾಡಗೀತೆಯಾಗಿ ಘೋಷಣೆ ಮಾಡಿದೆವು. ಈ ಹಾಡೇ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ನೀಡಿರುವ ಸಂದೇಶ.” “ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ ವ್ಯತ್ಯಾಸ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಹಿಂದೂ ಮತ್ತು ಮುಸ್ಲಿಂ ಇಬ್ಬರನ್ನೂ ಭೇಟಿ ಮಾಡಿ ಮಾತನಾಡಿದ್ದಾರೆ. ಅವರ ಸಮಸ್ಯೆ ಆಲಿಸಿದ್ದಾರೆ. ಯಾರು ತಪ್ಪು ಕೆಲಸ ಮಾಡಿದ್ದಾರೋ, ಅದನ್ನು ಖಂಡಿಸಿದ್ದಾರೆ, ಇಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಮೇಯ ಬರುವುದೇ ಇಲ್ಲ. ಯಾರು ಕಾನೂನು ಮೀರಿ ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ನೀಡುವ ಕೆಲಸ ಮಾಡುತ್ತೇವೆ. ಆದರೆ ಬಿಜೆಪಿಯವರು ಪಟ್ಟಿ ಇಟ್ಟುಕೊಂಡು ಕೆಲವರ ಮನೆಗೆ ಹೋಗಿದ್ದಾರೆ ಎಂದು ಆರೋಪಿಸಿದ ಶಿವಕುಮಾರ್,ನಾವು ನಿಜವಾದ ಹಿಂದುಗಳು, ಬಿಜೆಪಿಯವರು ನಕಲಿ ಹಿಂದುಗಳು ಎನ್ನುವ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…