ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆನಾಯಕನ ಹೆಸರು ಹೇಳಲಿ! ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ! ಎಂದು ಲೇವಡಿ ಮಾಡಿದೆ.
“ಮಾರಿ“ ಎಂದರೆ ಏನರ್ಥ ಬಿಜೆಪಿ ಕರ್ನಾಟಕ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ?ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಸ್ತ್ರೀಯರ ಗೌರವಕ್ಕೆ ಚ್ಯುತಿ ತಂದ ಬಿಜೆಪಿ ನಾಡಿನ ಸಮಸ್ತ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಬಿಜೆಪಿಯ ಸೋಲಿನ ಆತ್ಮಾವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ,
ಅಧ್ಯಕ್ಷರಿಂದ ಸೋಲಾಯ್ತು
ವಲಸಿಗರಿಂದ ಸೋಲಾಯ್ತು
ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
ಪಕ್ಷದ್ರೋಹಿಗಳಿಂದ ಸೋಲಾಯ್ತು
ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ!
ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?ಎಂದಿದೆ.
ಬೀದರ್: ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ…
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ…
ಬೆಂಗಳೂರು: ಬಿಗ್ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…