BREAKING NEWS

ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆನಾಯಕನ ಹೆಸರು ಹೇಳಲಿ : ಕಾಂಗ್ರೆಸ್ ಸವಾಲು

ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆನಾಯಕನ ಹೆಸರು ಹೇಳಲಿ! ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ! ಎಂದು ಲೇವಡಿ ಮಾಡಿದೆ.

“ಮಾರಿ“ ಎಂದರೆ ಏನರ್ಥ ಬಿಜೆಪಿ ಕರ್ನಾಟಕ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ?ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಸ್ತ್ರೀಯರ ಗೌರವಕ್ಕೆ ಚ್ಯುತಿ ತಂದ ಬಿಜೆಪಿ ನಾಡಿನ ಸಮಸ್ತ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.

ಬಿಜೆಪಿಯ ಸೋಲಿನ ಆತ್ಮಾವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ,

ಅಧ್ಯಕ್ಷರಿಂದ ಸೋಲಾಯ್ತು
ವಲಸಿಗರಿಂದ ಸೋಲಾಯ್ತು
ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
ಪಕ್ಷದ್ರೋಹಿಗಳಿಂದ ಸೋಲಾಯ್ತು

ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ!

ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?ಎಂದಿದೆ.

lokesh

Recent Posts

ನಾನು ಸಿಎಂ ಕುರ್ಚಿ ರೇಸ್‌ನಲ್ಲಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಮೈಸೂರು: ಬಜೆಟ್ ನಂತರ ಅಧಿಕಾರ ಹಂಚಿಕೆ ನಡೆಯುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ…

2 mins ago

ತುಮಕೂರಿನಲ್ಲಿ 11 ಕೋತಿಗಳ ನಿಗೂಢ ಸಾವು: ವಿಷಪ್ರಾಶನದ ಶಂಕೆ

ತುಮಕೂರು: ತುಮಕೂರಿನಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಕಿಡಿಗೇಡಿಗಳು ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ…

36 mins ago

ಮೈಸೂರು ವಿಮಾನ ನಿಲ್ದಾಣದ ಬಳಿ ಕಾಣಿಸಿಕೊಂಡ ಹುಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಆತಂಕ ಮುಂದುವರಿದಿದ್ದು, ಇಂದು ಬೆಳ್ಳಂಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಹುಲಿ ಕಾಣಿಸಿಕೊಂಡು…

48 mins ago

ಗ್ರಾಹಕರಿಗೆ ಬಿಗ್‌ ಶಾಕ್:‌ ಶತಕದ ಸನಿಹಕ್ಕೆ ಟೊಮೊಟೊ ದರ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಟೊಮೊಟೊ ದರ ಶತಕದ ಸಮೀಪಕ್ಕೆ ಬಂದಿದೆ. ಟೊಮೊಟೊ ಬೆಲೆ…

59 mins ago

‘ಬಡವರಿಗೆ ನೀಡಿದ ಭೂಮಿಯನ್ನು ಕಬಳಿಸುವ ಯತ್ನ’

ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…

4 hours ago

ಸಿದ್ದಾಪುರ ಮಾರುಕಟ್ಟೆಯಲ್ಲೊಂದು ತ್ಯಾಜ್ಯ ಶಿಖರ

ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ  ಸಿದ್ದಾಪುರ: ಸಾರ್ವಜನಿಕ…

4 hours ago