ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆನಾಯಕನ ಹೆಸರು ಹೇಳಲಿ! ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ! ಎಂದು ಲೇವಡಿ ಮಾಡಿದೆ.
“ಮಾರಿ“ ಎಂದರೆ ಏನರ್ಥ ಬಿಜೆಪಿ ಕರ್ನಾಟಕ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ?ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಸ್ತ್ರೀಯರ ಗೌರವಕ್ಕೆ ಚ್ಯುತಿ ತಂದ ಬಿಜೆಪಿ ನಾಡಿನ ಸಮಸ್ತ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಬಿಜೆಪಿಯ ಸೋಲಿನ ಆತ್ಮಾವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ,
ಅಧ್ಯಕ್ಷರಿಂದ ಸೋಲಾಯ್ತು
ವಲಸಿಗರಿಂದ ಸೋಲಾಯ್ತು
ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
ಪಕ್ಷದ್ರೋಹಿಗಳಿಂದ ಸೋಲಾಯ್ತು
ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ!
ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?ಎಂದಿದೆ.
ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ…
ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…
ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…