ಬೆಂಗಳೂರು : ಒಂದು ಗ್ರಾಮ ಪಂಚಾಯ್ತಿ ಎಲೆಕ್ಷನ್ ನಿಂತು ಗೆಲ್ಲಲಾಗದವರು ಇಡೀ ಬಿಜೆಪಿಯನ್ನು ಹಿಡಿತಕ್ಕೆ ಪಡೆದು ಕುಣಿಸುತ್ತಿದ್ದಾರೆ, ರೇಣುಕಾಚಾರ್ಯ ಅವರು ಹೇಳಿದ ಗ್ರಾ.ಪಂ ಚುನಾವಣೆಗೂ ನಿಲ್ಲಲಾಗದ ಆ ನಾಯಕ ಯಾರು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್ ದಮ್ಮು ತಾಕತ್ತಿದ್ದರೆ ಬಿಜೆಪಿ ಆ ದೊಣ್ಣೆನಾಯಕನ ಹೆಸರು ಹೇಳಲಿ! ಬಿಜೆಪಿ ಈಗ ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದೆಯೋ ಆತ್ಮಹತ್ಯೆ ವಿಮರ್ಶೆ ಮಾಡಿಕೊಳ್ಳುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ! ಎಂದು ಲೇವಡಿ ಮಾಡಿದೆ.
“ಮಾರಿ“ ಎಂದರೆ ಏನರ್ಥ ಬಿಜೆಪಿ ಕರ್ನಾಟಕ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಮಹಿಳೆಯರನ್ನು ಘನತೆ, ಗೌರವದ ದೃಷ್ಟಿಯಲ್ಲಿ ನೋಡಲು ಬಿಜೆಪಿಗೆ ಸಾಧ್ಯವಿಲ್ಲವೇಕೆ?ಮಹಿಳೆಯರನ್ನು “ಮಾರಿ” ಎನ್ನುವ ಮೂಲಕ ಬಿಜೆಪಿ ತನ್ನೊಳಗಿನ ವಿಷಕಾರಿ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ಸ್ತ್ರೀಯರ ಗೌರವಕ್ಕೆ ಚ್ಯುತಿ ತಂದ ಬಿಜೆಪಿ ನಾಡಿನ ಸಮಸ್ತ ಮಹಿಳೆಯರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
ಬಿಜೆಪಿಯ ಸೋಲಿನ ಆತ್ಮಾವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ,
ಅಧ್ಯಕ್ಷರಿಂದ ಸೋಲಾಯ್ತು
ವಲಸಿಗರಿಂದ ಸೋಲಾಯ್ತು
ಅಡ್ಜಸ್ಟ್ಮೆಂಟ್ ನಿಂದ ಸೋಲಾಯ್ತು
ಬಡವರ ಅಕ್ಕಿ ಕಿತ್ತುಕೊಂಡು ಸೋಲಾಯ್ತು
ಮೋದಿ ಬೀದಿ ಸುತ್ತಿದ್ದಕ್ಕೆ ಸೋಲಾಯ್ತು
ಗುಜರಾತ್ ಮಾಡೆಲ್ ನಿಂದ ಸೋಲಾಯ್ತು
ಪಕ್ಷದ್ರೋಹಿಗಳಿಂದ ಸೋಲಾಯ್ತು
ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು! ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ!
ರಾಜ್ಯಧ್ಯಕ್ಷರಿಂದಲೇ ಬಿಜೆಪಿಗೆ ಸೋಲಾಗಿದ್ದು ಎಂದು ರೇಣುಕಾಚಾರ್ಯ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಆರೋಪ ಕೇಳಿಯೂ ಸುಮ್ಮನಿರುವುದೇಕೆ? ನನ್ನದೇನೂ ತಪ್ಪಿಲ್ಲ, ಶಾಡೋ ಅಧ್ಯಕ್ಷರಾದ ಜೋಶಿ, ಸಂತೋಷ್ ಅವರೇ ಸೋಲಿಗೆ ಹೊಣೆ ಎಂದು ಘೋಷಿಸಿಬಿಡಲಿ! ಸೋಲಿಗೆ ಸರದಾರರಾದ ಜೋಶಿ, ಸಂತೋಷ್ ಅವರುಗಳ ಹೆಸರೆತ್ತಲು ಬಿಜೆಪಿಗರು ಭಯಪಾಡುತ್ತಿರುವುದೇಕೆ?ಎಂದಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…