BREAKING NEWS

ನಾನು ಭ್ರಷ್ಟ ಆಗಿದ್ದರೆ ಮತ್ಯಾರು ಪ್ರಮಾಣಿಕರು ಇಲ್ಲ : ಕೇಜ್ರಿವಾಲ್‌

ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿಮಾಡಿದ ಬೆನ್ನಲ್ಲೇ ಗರಂ ಆಗಿರುವ ಅವರು ಭಾನುವಾರ ನಾನು ಸಿಬಿಐ ಮುಂದೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ.
ಒಂದು ವೇಳೆ ನಾನು ಭ್ರಷ್ಟಾಚಾರಿಯಾಗಿದ್ದರೆ, ಈ ಜಗತ್ತಿನಲ್ಲಿ ಮತ್ಯಾರು ಪ್ರಮಾಣಿಕರು ಇಲ್ಲವೇ ಇಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ 75 ವರ್ಷಗಳ ಇತಿಹಾಸದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷ ಎಎಪಿ ಅಷ್ಟು ಗುರಿಯಾಗಿಲ್ಲ. ಏಕೆಂದರೆ ದೇಶದ ಜನಸಾಮಾನ್ಯರಿಗೆ ಏಕೈಕ ಆಶಾಕಿರಣ ನಮ್ಮ ಎಎಪಿ. ಹೀಗಾಗಿ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನಾಯಕರು ನನ್ನನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ನನ್ನ ಬಂಧನ ಆದರೆ, ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿಗೆ ತಿವಿದಿದ್ದಾರೆ.ಕೇಜ್ರಿವಾಲ್ ಅವರಿಗೆ ಏಪ್ರಿಲ್‌ 16 ಭಾನುವಾರ 11 ಗಂಟೆಗೆ ಸಿಬಿಐನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಇದೀಗ ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡುವ ಸಲುವಾಗಿ ದೆಹಲಿ ಸರ್ಕಾರ ‘ಅಬಕಾರಿ ನೀತಿ 2020–22 ಅನ್ನು ಜಾರಿಗೊಳಿಸಿದ್ದು, ಇದರಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪವನ್ನು ಆಪ್‌ ಸರ್ಕಾರ ಬಲವಾಗಿ ವಿರೋಧಿಸಿತ್ತು. ನಂತರ ಈ ನೀತಿಯನ್ನು ರದ್ದುಗೊಳಿಸಲಾಗಿತ್ತು. ನಮ್ಮ ಸರ್ಕಾರದ ಅಭಿವೃದ್ದಿ ಕೆಲಸಗಳನ್ನು ಕಂಡು ತಾಳಲಾರದೆ ಕೇಂದ್ರ ಬಿಜೆಪಿ ಸರ್ಕಾರ ಆಪ್‌ ನಾಯಕರನ್ನು ಜೈಲಿಗಟ್ಟಿದೆ ಎಂದು ಎಎಪಿ ಆರೋಪಿಸಿದೆ.

 

lokesh

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

3 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

4 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

4 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

5 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

5 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

5 hours ago