BREAKING NEWS

ನಾನು ಭ್ರಷ್ಟ ಆಗಿದ್ದರೆ ಮತ್ಯಾರು ಪ್ರಮಾಣಿಕರು ಇಲ್ಲ : ಕೇಜ್ರಿವಾಲ್‌

ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿಮಾಡಿದ ಬೆನ್ನಲ್ಲೇ ಗರಂ ಆಗಿರುವ ಅವರು ಭಾನುವಾರ ನಾನು ಸಿಬಿಐ ಮುಂದೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ.
ಒಂದು ವೇಳೆ ನಾನು ಭ್ರಷ್ಟಾಚಾರಿಯಾಗಿದ್ದರೆ, ಈ ಜಗತ್ತಿನಲ್ಲಿ ಮತ್ಯಾರು ಪ್ರಮಾಣಿಕರು ಇಲ್ಲವೇ ಇಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ 75 ವರ್ಷಗಳ ಇತಿಹಾಸದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷ ಎಎಪಿ ಅಷ್ಟು ಗುರಿಯಾಗಿಲ್ಲ. ಏಕೆಂದರೆ ದೇಶದ ಜನಸಾಮಾನ್ಯರಿಗೆ ಏಕೈಕ ಆಶಾಕಿರಣ ನಮ್ಮ ಎಎಪಿ. ಹೀಗಾಗಿ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನಾಯಕರು ನನ್ನನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ನನ್ನ ಬಂಧನ ಆದರೆ, ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿಗೆ ತಿವಿದಿದ್ದಾರೆ.ಕೇಜ್ರಿವಾಲ್ ಅವರಿಗೆ ಏಪ್ರಿಲ್‌ 16 ಭಾನುವಾರ 11 ಗಂಟೆಗೆ ಸಿಬಿಐನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಇದೀಗ ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡುವ ಸಲುವಾಗಿ ದೆಹಲಿ ಸರ್ಕಾರ ‘ಅಬಕಾರಿ ನೀತಿ 2020–22 ಅನ್ನು ಜಾರಿಗೊಳಿಸಿದ್ದು, ಇದರಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪವನ್ನು ಆಪ್‌ ಸರ್ಕಾರ ಬಲವಾಗಿ ವಿರೋಧಿಸಿತ್ತು. ನಂತರ ಈ ನೀತಿಯನ್ನು ರದ್ದುಗೊಳಿಸಲಾಗಿತ್ತು. ನಮ್ಮ ಸರ್ಕಾರದ ಅಭಿವೃದ್ದಿ ಕೆಲಸಗಳನ್ನು ಕಂಡು ತಾಳಲಾರದೆ ಕೇಂದ್ರ ಬಿಜೆಪಿ ಸರ್ಕಾರ ಆಪ್‌ ನಾಯಕರನ್ನು ಜೈಲಿಗಟ್ಟಿದೆ ಎಂದು ಎಎಪಿ ಆರೋಪಿಸಿದೆ.

 

lokesh

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

12 hours ago