BREAKING NEWS

ನಾನು ಭ್ರಷ್ಟ ಆಗಿದ್ದರೆ ಮತ್ಯಾರು ಪ್ರಮಾಣಿಕರು ಇಲ್ಲ : ಕೇಜ್ರಿವಾಲ್‌

ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿಮಾಡಿದ ಬೆನ್ನಲ್ಲೇ ಗರಂ ಆಗಿರುವ ಅವರು ಭಾನುವಾರ ನಾನು ಸಿಬಿಐ ಮುಂದೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ.
ಒಂದು ವೇಳೆ ನಾನು ಭ್ರಷ್ಟಾಚಾರಿಯಾಗಿದ್ದರೆ, ಈ ಜಗತ್ತಿನಲ್ಲಿ ಮತ್ಯಾರು ಪ್ರಮಾಣಿಕರು ಇಲ್ಲವೇ ಇಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ 75 ವರ್ಷಗಳ ಇತಿಹಾಸದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷ ಎಎಪಿ ಅಷ್ಟು ಗುರಿಯಾಗಿಲ್ಲ. ಏಕೆಂದರೆ ದೇಶದ ಜನಸಾಮಾನ್ಯರಿಗೆ ಏಕೈಕ ಆಶಾಕಿರಣ ನಮ್ಮ ಎಎಪಿ. ಹೀಗಾಗಿ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ನಾಯಕರು ನನ್ನನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ನನ್ನ ಬಂಧನ ಆದರೆ, ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿಗೆ ತಿವಿದಿದ್ದಾರೆ.ಕೇಜ್ರಿವಾಲ್ ಅವರಿಗೆ ಏಪ್ರಿಲ್‌ 16 ಭಾನುವಾರ 11 ಗಂಟೆಗೆ ಸಿಬಿಐನ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ದೆಹಲಿ ಮಾಜಿ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಇದೀಗ ಈ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.

ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡುವ ಸಲುವಾಗಿ ದೆಹಲಿ ಸರ್ಕಾರ ‘ಅಬಕಾರಿ ನೀತಿ 2020–22 ಅನ್ನು ಜಾರಿಗೊಳಿಸಿದ್ದು, ಇದರಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಆರೋಪವನ್ನು ಆಪ್‌ ಸರ್ಕಾರ ಬಲವಾಗಿ ವಿರೋಧಿಸಿತ್ತು. ನಂತರ ಈ ನೀತಿಯನ್ನು ರದ್ದುಗೊಳಿಸಲಾಗಿತ್ತು. ನಮ್ಮ ಸರ್ಕಾರದ ಅಭಿವೃದ್ದಿ ಕೆಲಸಗಳನ್ನು ಕಂಡು ತಾಳಲಾರದೆ ಕೇಂದ್ರ ಬಿಜೆಪಿ ಸರ್ಕಾರ ಆಪ್‌ ನಾಯಕರನ್ನು ಜೈಲಿಗಟ್ಟಿದೆ ಎಂದು ಎಎಪಿ ಆರೋಪಿಸಿದೆ.

 

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago