BREAKING NEWS

ನನ್ನ ಸಿಎಂ ಮಾಡಿದ್ರೆ ಸಿದ್ದು ಸವಾಲು ಎದುರಿಸುತ್ತೇನೆ : ಲೋಕಸಭೆ ಚುನಾವಣೆಯಲ್ಲಿ 20 ಸೀಟ್‌ ಗೆಲ್ಲಿಸುತ್ತೇನೆ

ನವದೆಹಲಿ : ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದು ಈಗಾಗಲೇ ಮೂರ್ನಾಲ್ಕು ದಿನಗಳಾದರೂ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಹೈಕಮಾಂಡ್‌ಗೆ ಸಾಧ್ಯವಾಗಿಲ್ಲ. ಸಿಎಂ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕರೆಸಿ ಹೈಕಮಾಂಡ್‌ ನಾಯಕರು ಚರ್ಚೆ ಮಾಡಿದರೂ, ಸಂಧಾನ ಮಾಡಿದರೂ ಯಾವುದೇ ಮಾತುಕತೆ ಸಫಲವಾಗಿಲ್ಲ. ಇಂದು ಮಧ್ಯಾಹ್ನ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ ಡಿ.ಕೆ.ಶಿವಕುಮಾರ್ ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ 20 ಸ್ಥಾನ ಗೆಲ್ಲಿಸಿಕೊಡುತ್ತೇನೆ : ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದನ್ನು ಒಪ್ಪಲು ಸಾಧ್ಯವೇ ಇಲ್ಲ. ನಾನು ಮುಖ್ಯಮಂತ್ರಿ ಯಾದರೆ ಸಿದ್ದರಾಮಯ್ಯ ಅವರ ಸವಾಲುಗಳನ್ನು ಎದುರಿಸುತ್ತೇನೆ. ಪಕ್ಷದ ಒಬ್ಬನೇ ಒಬ್ಬ ಶಾಸಕ ಪಕ್ಷ ತೊರೆಯದಂತೆ ನೋಡಿಕೊಳ್ಳುತ್ತೇನೆ. ನನ್ನ ಮೇಲಿನ ಕೇಸ್ ಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಇದರಿಂದ ಪಕ್ಷಕ್ಕೆ ಯಾವುದೇ ಮುಜುಗರ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಿಸಿ ಕೊಡುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಅವರು ರಾಹುಲ್‌ಗಾಂಧಿ ಮುಂದೆ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಈ ವೇಳೆಯೂ ಸಂಧಾನ ಮಾತುಕತೆ ವಿಫಲವಾಗಿದ್ದು, ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಚರ್ಚೆ ನಡೆಸಲು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ‌

ನನಗೆ ಮೊದಲು ಅವಕಾಶ ಕೊಡಿ : ಮುಖ್ಯಮಂತ್ರಿ ಸ್ಥಾನಕ್ಕಾಗಿ ಚರ್ಚೆ ನಡೆಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಡಿ.ಕೆ. ಶಿವಕುಮಾರ್‌ ತೀವ್ರವಾಗಿ ಅಸಮಧಾನಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಅಸಮಧಾನ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಸಮಯದಿಂದ ಮಾತುಕತೆ ನಡೆಸಿದ ಬಳಿಕ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಒಪ್ಪಿಕೊಂಡಿದ್ದಾರಂತೆ. ಆದರೆ, ಮುಖ್ಯಮಂತ್ರಿ ಆಗುವ ಅವಕಾಶವನ್ನು ಮೊದಲು ನನಗೆ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದಾರಂತೆ. ಹೈಕಮಾಂಡ್‌ ಹೇಳಿದಂತೆ ನಾನು ಕೇಳ್ತೀನಿ ಆದರೆ, ಮೊದಲು ಸಿಎಂ ಆಗುವ ಅವಕಾಶ ನನಗೆ ಕೊಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿಯಾಂಕಾ ಗಾಂಧಿ ಎಂಟ್ರಿ : ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಏರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದ್ದು, ಪಕ್ಷದ ಯಾವ ವರಿಷ್ಠರೂ ಮಾತುಕತೆ ನಡೆಸಿದರೂ ಇಬ್ಬರೂ ನಾಯಕರ ಮನವೊಲಿಕೆ ಸಾಧ್ಯವಾಗುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಸಹಿತ ಯಾರು ಮಾತುಕತೆ ನಡೆಸಿದರೂ ಡಿಕೆಶಿ ಮತ್ತು ಸಿದ್ದರಾಮಯ್ಯ ಸಿಎಂ ಹುದ್ದೆ ತನಗೇ ಬೇಕೆಂದು ರಚ್ಚೆ ಹಿಡಿದು ಕುಳಿತಿದ್ದಾರೆ. ಇದೀಗ ಈ ಸಮಸ್ಯೆ ಬಗೆಹರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಬ್ಬರ ಜೊತೆಗೆ ಮಾತುಕತೆಗೆ ಪ್ರಿಯಾಂಕ ಗಾಂಧಿ ಒಪ್ಪಿದ್ದಾರೆ. ಉಭಯ ನಾಯಕರ ಜೊತೆಗೆ ಮಾತುಕತೆ ಮಾಡಲು ಪ್ರಿಯಾಂಕಾ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿಗೆ ಈ ಬಗ್ಗೆ ಪ್ರಿಯಾಂಕ ತಿಳಿಸಿದ್ದಾರೆ. ಡಿಕೆಶಿ ಮನವೊಲಿಕೆಗೆ ಮುಂದಾಗ್ತಾರಾ ಪ್ರಿಯಾಂಕಾ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

18 mins ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

31 mins ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

58 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

2 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

2 hours ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

3 hours ago