BREAKING NEWS

ನನ್ನ ಸಿಎಂ ಮಾಡಿದ್ರೆ ಸಿದ್ದು ಸವಾಲು ಎದುರಿಸುತ್ತೇನೆ : ಲೋಕಸಭೆ ಚುನಾವಣೆಯಲ್ಲಿ 20 ಸೀಟ್‌ ಗೆಲ್ಲಿಸುತ್ತೇನೆ

ನವದೆಹಲಿ : ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಸಿದ್ದರಾಮಯ್ಯನವರ ಎಲ್ಲ ಸವಾಲುಗಳನ್ನು ನಾನು ಎದುರಿಸುತ್ತೇನೆ. ಜೊತೆಗೆ 2024ರ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಿಸಿ ಕೊಡುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದು ಈಗಾಗಲೇ ಮೂರ್ನಾಲ್ಕು ದಿನಗಳಾದರೂ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ಹೈಕಮಾಂಡ್‌ಗೆ ಸಾಧ್ಯವಾಗಿಲ್ಲ. ಸಿಎಂ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕರೆಸಿ ಹೈಕಮಾಂಡ್‌ ನಾಯಕರು ಚರ್ಚೆ ಮಾಡಿದರೂ, ಸಂಧಾನ ಮಾಡಿದರೂ ಯಾವುದೇ ಮಾತುಕತೆ ಸಫಲವಾಗಿಲ್ಲ. ಇಂದು ಮಧ್ಯಾಹ್ನ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ಮಾಡಿದ ಡಿ.ಕೆ.ಶಿವಕುಮಾರ್ ನೀವು ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ 20 ಸ್ಥಾನ ಗೆಲ್ಲಿಸಿಕೊಡುತ್ತೇನೆ : ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದನ್ನು ಒಪ್ಪಲು ಸಾಧ್ಯವೇ ಇಲ್ಲ. ನಾನು ಮುಖ್ಯಮಂತ್ರಿ ಯಾದರೆ ಸಿದ್ದರಾಮಯ್ಯ ಅವರ ಸವಾಲುಗಳನ್ನು ಎದುರಿಸುತ್ತೇನೆ. ಪಕ್ಷದ ಒಬ್ಬನೇ ಒಬ್ಬ ಶಾಸಕ ಪಕ್ಷ ತೊರೆಯದಂತೆ ನೋಡಿಕೊಳ್ಳುತ್ತೇನೆ. ನನ್ನ ಮೇಲಿನ ಕೇಸ್ ಗಳು ಸುಪ್ರೀಂ ಕೋರ್ಟ್‌ನಲ್ಲಿವೆ. ಇದರಿಂದ ಪಕ್ಷಕ್ಕೆ ಯಾವುದೇ ಮುಜುಗರ ಆಗಲ್ಲ. ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲಿಸಿ ಕೊಡುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಅವರು ರಾಹುಲ್‌ಗಾಂಧಿ ಮುಂದೆ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಈ ವೇಳೆಯೂ ಸಂಧಾನ ಮಾತುಕತೆ ವಿಫಲವಾಗಿದ್ದು, ಪ್ರಿಯಾಂಕ್ ಖರ್ಗೆ ಅವರು ಕರ್ನಾಟಕ ಮುಖ್ಯಮಂತ್ರಿ ಆಯ್ಕೆಗೆ ಚರ್ಚೆ ನಡೆಸಲು ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ‌

ನನಗೆ ಮೊದಲು ಅವಕಾಶ ಕೊಡಿ : ಮುಖ್ಯಮಂತ್ರಿ ಸ್ಥಾನಕ್ಕಾಗಿ ಚರ್ಚೆ ನಡೆಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಡಿ.ಕೆ. ಶಿವಕುಮಾರ್‌ ತೀವ್ರವಾಗಿ ಅಸಮಧಾನಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಅಸಮಧಾನ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಸಮಯದಿಂದ ಮಾತುಕತೆ ನಡೆಸಿದ ಬಳಿಕ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಒಪ್ಪಿಕೊಂಡಿದ್ದಾರಂತೆ. ಆದರೆ, ಮುಖ್ಯಮಂತ್ರಿ ಆಗುವ ಅವಕಾಶವನ್ನು ಮೊದಲು ನನಗೆ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಪಟ್ಟು ಹಿಡಿದಿದ್ದಾರಂತೆ. ಹೈಕಮಾಂಡ್‌ ಹೇಳಿದಂತೆ ನಾನು ಕೇಳ್ತೀನಿ ಆದರೆ, ಮೊದಲು ಸಿಎಂ ಆಗುವ ಅವಕಾಶ ನನಗೆ ಕೊಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಿಯಾಂಕಾ ಗಾಂಧಿ ಎಂಟ್ರಿ : ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಏರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದ್ದು, ಪಕ್ಷದ ಯಾವ ವರಿಷ್ಠರೂ ಮಾತುಕತೆ ನಡೆಸಿದರೂ ಇಬ್ಬರೂ ನಾಯಕರ ಮನವೊಲಿಕೆ ಸಾಧ್ಯವಾಗುತ್ತಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಸಹಿತ ಯಾರು ಮಾತುಕತೆ ನಡೆಸಿದರೂ ಡಿಕೆಶಿ ಮತ್ತು ಸಿದ್ದರಾಮಯ್ಯ ಸಿಎಂ ಹುದ್ದೆ ತನಗೇ ಬೇಕೆಂದು ರಚ್ಚೆ ಹಿಡಿದು ಕುಳಿತಿದ್ದಾರೆ. ಇದೀಗ ಈ ಸಮಸ್ಯೆ ಬಗೆಹರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಬ್ಬರ ಜೊತೆಗೆ ಮಾತುಕತೆಗೆ ಪ್ರಿಯಾಂಕ ಗಾಂಧಿ ಒಪ್ಪಿದ್ದಾರೆ. ಉಭಯ ನಾಯಕರ ಜೊತೆಗೆ ಮಾತುಕತೆ ಮಾಡಲು ಪ್ರಿಯಾಂಕಾ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿಗೆ ಈ ಬಗ್ಗೆ ಪ್ರಿಯಾಂಕ ತಿಳಿಸಿದ್ದಾರೆ. ಡಿಕೆಶಿ ಮನವೊಲಿಕೆಗೆ ಮುಂದಾಗ್ತಾರಾ ಪ್ರಿಯಾಂಕಾ ಎಂಬುದನ್ನು ಕಾದು ನೋಡಬೇಕಿದೆ.

lokesh

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago