BREAKING NEWS

ಇದೊಮ್ಮೆ ಟಿಕೆಟ್ ಕೊಟ್ಟಿದ್ದರೆ ರಾಜಕೀಯ ನಿವೃತ್ತಿಗೂ ಸಿದ್ಧವಿದ್ದೆ : ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡ ನಂತರ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನಾನು ಕಾಂಗ್ರೆಸ್​ಗೆ ಸೇರ್ಪಡೆಗೊಂಡ ತಕ್ಷಣ ಈ ಮೊದಲು ಸ್ಥಾನಮಾನ ನೀಡಿದ್ದ ಪಕ್ಷವನ್ನು ಬೈಯಬೇಕೆಂದೇನೂ ಇಲ್ಲ ಎಂದು ಹೇಳುವ ಮೂಲಕ ಬಿಜೆಪಿ ಬಗ್ಗೆ ಮೃಧುಧೋರಣೆ ವ್ಯಕ್ತಪಡಿಸಿದರು. ಬಿಜೆಪಿಯಲ್ಲಿ ಇರುವ ಕೆಲವರು ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ ಎಂದರು.
ನಾನು ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡಿಲ್ಲ. ಅಧಿಕಾರ ಬೇಕಾಗಿದ್ದರೆ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ಬೇಡವೆಂದು ನಾನು ಹೇಳುತ್ತಿರಲಿಲ್ಲ. ಅನೇಕರು 9, 10 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದಿದ್ದಾರೆ. 80 ವರ್ಷ ಆದರೂ ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ ಎಂದು ಹೇಳಿದರು.

ನನ್ನನ್ನು ಹಾಗೂ ನನ್ನ ಬೆಂಬಲಿಗರನ್ನು ಗೌರವದಿಂದ ಕಾಣುವಂತೆ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ. ಇದನ್ನು ಹೊರತುಪಡಿಸಿ ಇನ್ನಾವುದೇ ಷರತ್ತು ಇಲ್ಲದೇ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು.
ಏ. 19ರಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

lokesh

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago