BREAKING NEWS

ಇದೊಮ್ಮೆ ಟಿಕೆಟ್ ಕೊಟ್ಟಿದ್ದರೆ ರಾಜಕೀಯ ನಿವೃತ್ತಿಗೂ ಸಿದ್ಧವಿದ್ದೆ : ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡ ನಂತರ ಹುಬ್ಬಳ್ಳಿಗೆ ಆಗಮಿಸಿದ ಜಗದೀಶ ಶೆಟ್ಟರ್, ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನಾನು ಕಾಂಗ್ರೆಸ್​ಗೆ ಸೇರ್ಪಡೆಗೊಂಡ ತಕ್ಷಣ ಈ ಮೊದಲು ಸ್ಥಾನಮಾನ ನೀಡಿದ್ದ ಪಕ್ಷವನ್ನು ಬೈಯಬೇಕೆಂದೇನೂ ಇಲ್ಲ ಎಂದು ಹೇಳುವ ಮೂಲಕ ಬಿಜೆಪಿ ಬಗ್ಗೆ ಮೃಧುಧೋರಣೆ ವ್ಯಕ್ತಪಡಿಸಿದರು. ಬಿಜೆಪಿಯಲ್ಲಿ ಇರುವ ಕೆಲವರು ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಗೊಳಿಸುತ್ತೇನೆ ಎಂದರು.
ನಾನು ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡಿಲ್ಲ. ಅಧಿಕಾರ ಬೇಕಾಗಿದ್ದರೆ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ಬೇಡವೆಂದು ನಾನು ಹೇಳುತ್ತಿರಲಿಲ್ಲ. ಅನೇಕರು 9, 10 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದಿದ್ದಾರೆ. 80 ವರ್ಷ ಆದರೂ ಸಕ್ರಿಯ ರಾಜಕಾರಣದಲ್ಲಿ ಇದ್ದಾರೆ ಎಂದು ಹೇಳಿದರು.

ನನ್ನನ್ನು ಹಾಗೂ ನನ್ನ ಬೆಂಬಲಿಗರನ್ನು ಗೌರವದಿಂದ ಕಾಣುವಂತೆ ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದೇನೆ. ಇದನ್ನು ಹೊರತುಪಡಿಸಿ ಇನ್ನಾವುದೇ ಷರತ್ತು ಇಲ್ಲದೇ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು.
ಏ. 19ರಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ತಿಳಿಸಿದರು.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

8 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

10 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

12 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

13 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

14 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

14 hours ago