BREAKING NEWS

ʼಇಂಡಿಯಾʼ ಮೈತ್ರಿಕೂಟ ಗೆಲ್ಲದಿದ್ದರೆ ಇಡೀ ದೇಶ ಮಣಿಪುರ, ಹರ್ಯಾಣದಂತಾಗುತ್ತದೆ: ಸಿಎಂ ಎಂ.ಕೆ. ಸ್ಟಾಲಿನ್

ಚೆನ್ನೈ: ಈ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಹಾಗೂ ಇತ್ತೀಚೆಗೆ ಧಾರ್ಮಿಕ ಮೆರವಣಿಗೆಯೊಂದರ ಮೇಲೆ ದಾಳಿ ನಡೆದ ನಂತರ ಹರ್ಯಾಣದಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರವನ್ನು ಪ್ರಸ್ತಾಪಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಐಎನ್‌ಡಿಐಎ ಮೈತ್ರಿಕೂಟ ಗೆಲ್ಲದಿದ್ದರೆ, ಇಡೀ ದೇಶ ಮಣಿಪುರ ಹಾಗೂ ಹರ್ಯಾಣ ರಾಜ್ಯದಂತೆ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಲಯಾಳಂ, ತಮಿಳು, ತೆಲುಗು, ಕನ್ನಡ ಹಾಗೂ ಹಿಂದಿ ಸೇರಿದಂತೆ ಐದು ಭಾಷೆಗಳ ಆವೃತ್ತಿಯಲ್ಲಿ ಬಿಡುಗಡೆಯಾಗಿರುವ ತಮ್ಮ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ತಾನು ಚುನಾವಣೆಗೂ ಮುಂಚೆ ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕುರಿತ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ಬಹುಸಂಸ್ಕೃತಿ ಹಾಗೂ ವೈವಿಧ್ಯಮಯ ಭಾರತವನ್ನು ನಿರ್ಮಿಸುವಂತೆ ಜನತೆಗೆ ಕರೆ ನೀಡಿರುವ ಎಂ.ಕೆ. ಸ್ಟಾಲಿನ್, ಸಾರ್ವಜನಿಕ ಸಂಸ್ಥೆಗಳನ್ನು ಹಾಳುಗೆಡವಿ, ಅವುಗಳನ್ನು ಕಾರ್ಪೊರೇಟ್ ಉದ್ಯಮಿಗಳಿಗೆ ಹಸ್ತಾಂತರಿಸುತ್ತಿರುವ ವಿಷಯವನ್ನು ಮರೆಮಾಚಲು ಬಿಜೆಪಿಯು ಕೋಮುವಾದವನ್ನು ಮುನ್ನೆಲೆಗೆ ತರುತ್ತಿದೆ ಎಂದೂ ದೂರಿದ್ದಾರೆ. ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗಿ ಉದ್ಯಮಿಗೆ ಮಾರಾಟ ಮಾಡಲಾಯಿತು ಹಾಗೂ ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಬಿಜೆಪಿಗೆ ನಿಕಟವಾಗಿರುವ ಉದ್ಯಮಿಗಳ ವಶಕ್ಕೆ ನೀಡಲಾಯಿತು ಎಂದು ಅವರು ತಮ್ಮ ಮಾತಿಗೆ ನಿದರ್ಶನ ನೀಡಿದ್ದಾರೆ.

2002ರಲ್ಲಿನ ಗುಜರಾತ್ ಗಲಭೆಗಳನ್ನೂ ಉಲ್ಲೇಖಿಸಿರುವ ಡಿಎಂಕೆ ಮುಖ್ಯಸ್ಥರೂ ಆದ ಎಂ.ಕೆ.ಸ್ಟಾಲಿನ್, 2002ರಲ್ಲಿ ಗುಜರಾತ್ ನಲ್ಲಿ ಬಿತ್ತಿದ ದ್ವೇಷವು, 2023ರಲ್ಲಿ ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹಾಗೂ ಹರ್ಯಾಣದಲ್ಲಿನ ಕೋಮು ಸಂಘರ್ಷವಾಗಿ ಫಲ ನೀಡಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.

ಐಎನ್‌ಡಿಐಎ ಮೈತ್ರಿಕೂಟವನ್ನು ಸಾಮಾಜಿಕ ನ್ಯಾಯ, ಸಾಮಾಜಿಕ ಸೌಹಾರ್ದತೆ, ಒಕ್ಕೂಟ ವ್ಯವಸ್ಥೆ, ಜಾತ್ಯತೀತ ರಾಜಕಾರಣ ಹಾಗೂ ಸಮಾಜವಾದವನ್ನು ಮರು ಸ್ಥಾಪಿಸಲು ರಚಿಸಲಾಗಿದೆ. ಒಂದು ವೇಳೆ ದ್ವೇಷವನ್ನು ತಡೆಯಲು ಸಾಧ್ಯವಾಗದಿದ್ದರೆ, ಯಾರೂ ಕೂಡಾ ಭಾರತವನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

“ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾದಾಗಲೆಲ್ಲ ಡಿಎಂಕೆ ಮುಂಚೂಣಿ ಹೋರಾಟದಲ್ಲಿರುತ್ತಿತ್ತು” ಎಂದೂ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.

ಇದರ ಬೆನ್ನಿಗೇ, ತಮ್ಮ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಿರುವ ಎಂ.ಕೆ.ಸ್ಟಾಲಿನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿಯು, ಡಿಎಂಕೆಯು ಧರ್ಮ, ಜಾತಿ ಹಾಗೂ ಭಾಷೆಯ ಆಧಾರದಲ್ಲಿ ದೇಶವನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದೆ.

ಒಕ್ಕೂಟ ವ್ಯವಸ್ಥೆಯ ಮೇಲೆ ದಾಳಿ ನಡೆಸಲಾಗುತ್ತಿದೆ ಎಂಬ ಎಂ.ಕೆ.ಸ್ಟಾಲಿನ್ ರ ಆರೋಪವನ್ನು ತಳ್ಳಿ ಹಾಕಿರುವ ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷ ನಾರಾಯಣ್ ತಿರುಪತಿ, ಕೇಂದ್ರ ಸರ್ಕಾರವು ತಮಿಳುನಾಡಿಗೆ ನೀಡಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

‘ಭಾರತಕ್ಕಾಗಿ ಮಾತನಾಡುತ್ತಿದ್ದೇನೆ” ಎಂಬ ಶೀರ್ಷಿಕೆ ಹೊಂದಿದ್ದ ಪಾಡ್ ಕಾಸ್ಟ್ ಸಂಚಿಕೆಯಲ್ಲಿ, ‘ಬಿಜೆಪಿ ಆಡಳಿತಾವಧಿಯಲ್ಲಿ ಭಾರತ ಹೇಗೆ ನಾಶವಾಗುತ್ತಿದೆ’ ಎಂಬ ಕುರಿತು ಎಂ.ಕೆ.ಸ್ಟಾಲಿನ್ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದರು.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago