ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಸ್ವಾಗತ ಕೋರುತ್ತೇನೆ. ಆದರೆ ಅವರು ಈವರೆಗೂ ನನ್ನ ಜೊತೆ ಮಾತನಾಡಿಲ್ಲ. ಬಿಜೆಪಿಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಿರುವುದು ನನಗೆ ಸಂಬಂಸಿದ್ದಲ್ಲ. ಅವರ ಅಂತರಿಕ ವಿದ್ಯಮಾನಗಳನ್ನು ನಾವ್ಯಾಕೆ ನೋಡಲು ಹೋಗೋಣ ಎಂದು ಪ್ರಶ್ನಿಸಿದರು.
ಜಗದೀಶ್ ಶೆಟ್ಟರ್ ಒಳ್ಳೆಯ ಮುಖಂಡ ಎಂಬುದರ ಬಗ್ಗೆ ಎರಡು ಮಾತಿಲ್ಲ. ಅವರು ಕಾಂಗ್ರೆಸ್ಗೆ ಬರುವ ಬಗ್ಗೆ ಮೊದಲು ತೀರ್ಮಾನ ಮಾಡಲಿ, ಬರದಿರುವ ಮೊದಲೇ ನಾನು ಹೇಗೆ ಸ್ವಾಗತ ಕೋರಲಿ ಎಂದರು.
ಬಿಜೆಪಿ ಜಗದೀಶ್, ಈಶ್ವರಪ್ಪ ಅವರಂತವರನ್ನು ಬಳಸಿ ಬಿಸಾಡುತ್ತಿದೆ. ಆ ಪಕ್ಷಕ್ಕೆ ಹಿರಿಯರ ಮೇಲೆ ಗೌರವ ಇಲ್ಲ. ಶೆಟ್ಟರ್ ಮಾಜಿ ಮುಖ್ಯಮಂತ್ರಿಯಾಗಿದ್ದವರು, ಹಿರಿಯ ನಾಯಕರು. ಕೆ.ಎಸ್.ಈಶ್ವರಪ್ಪ ಬಿಜೆಪಿ-ಆರೆಸ್ಸ್ ಪರವಾಗಿ ಅಷ್ಟೊಂದು ಮಾತನಾಡುತ್ತಿದ್ದರು. ಅವರಿಗೂ ಟಿಕೆಟ್ ತಪ್ಪಿಸುತ್ತಿದ್ದಾರೆ. ಪ್ರಭಾವಿ ನಾಯಕರನ್ನು ಬಳಸಿ ಈಗ ಮೂಲೆ ಗುಂಪು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…