BREAKING NEWS

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಸ್ವಾಗತ ಕೋರುತ್ತೇನೆ. ಆದರೆ ಅವರು ಈವರೆಗೂ ನನ್ನ ಜೊತೆ ಮಾತನಾಡಿಲ್ಲ. ಬಿಜೆಪಿಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಿರುವುದು ನನಗೆ ಸಂಬಂಸಿದ್ದಲ್ಲ. ಅವರ ಅಂತರಿಕ ವಿದ್ಯಮಾನಗಳನ್ನು ನಾವ್ಯಾಕೆ ನೋಡಲು ಹೋಗೋಣ ಎಂದು ಪ್ರಶ್ನಿಸಿದರು.

ಜಗದೀಶ್ ಶೆಟ್ಟರ್ ಒಳ್ಳೆಯ ಮುಖಂಡ ಎಂಬುದರ ಬಗ್ಗೆ ಎರಡು ಮಾತಿಲ್ಲ. ಅವರು ಕಾಂಗ್ರೆಸ್‍ಗೆ ಬರುವ ಬಗ್ಗೆ ಮೊದಲು ತೀರ್ಮಾನ ಮಾಡಲಿ, ಬರದಿರುವ ಮೊದಲೇ ನಾನು ಹೇಗೆ ಸ್ವಾಗತ ಕೋರಲಿ ಎಂದರು.

ಬಿಜೆಪಿ ಜಗದೀಶ್, ಈಶ್ವರಪ್ಪ ಅವರಂತವರನ್ನು ಬಳಸಿ ಬಿಸಾಡುತ್ತಿದೆ. ಆ ಪಕ್ಷಕ್ಕೆ ಹಿರಿಯರ ಮೇಲೆ ಗೌರವ ಇಲ್ಲ. ಶೆಟ್ಟರ್ ಮಾಜಿ ಮುಖ್ಯಮಂತ್ರಿಯಾಗಿದ್ದವರು, ಹಿರಿಯ ನಾಯಕರು. ಕೆ.ಎಸ್.ಈಶ್ವರಪ್ಪ ಬಿಜೆಪಿ-ಆರೆಸ್‍ಸ್ ಪರವಾಗಿ ಅಷ್ಟೊಂದು ಮಾತನಾಡುತ್ತಿದ್ದರು. ಅವರಿಗೂ ಟಿಕೆಟ್ ತಪ್ಪಿಸುತ್ತಿದ್ದಾರೆ. ಪ್ರಭಾವಿ ನಾಯಕರನ್ನು ಬಳಸಿ ಈಗ ಮೂಲೆ ಗುಂಪು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

andolanait

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

5 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

5 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

6 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

6 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

11 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

11 hours ago