BREAKING NEWS

ಪರಮೇಶ್ವರ್ ಗೆದ್ದರೆ ನಾನೇ ಗೆದ್ದಂತೆ : ಕೊರಟಗೆರೆಯಲ್ಲಿ ಮಾಜಿ ಡಿಸಿಎಂ ಪರ ಸಿದ್ದರಾಮಯ್ಯ ಪ್ರಚಾರ

ತುಮಕೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಗೆದ್ದರೆ ನಾನು ಗೆದ್ದಂತೆ, ಅದನ್ನು ಅರಿತು ಜನರು ಮತ ಹಾಕಬೇಕು’ ಎಂದು  ಸಿದ್ದರಾಮಯ್ಯ ಹೇಳಿದ್ದಾರೆ.
ಕೊರಟಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಪರ ಪ್ರಚಾರ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಗಾಯಗೊಂಡಿರುವುದು ವಿರೋಧ ಪಕ್ಷಗಳ ಹತಾಶೆಯ ದ್ಯೋತಕವಾಗಿದೆ ಎಂದಿದೆ.
ಇತ್ತೀಚೆಗೆ ರಾಜೀವ್ ಭವನ ಉದ್ಘಾಟನೆಗೆ ನಾನು ಬಂದಿಲ್ಲ ಎಂದು ಅಪಪ್ರಚಾರ ಮಾಡಿದರು. 2013ರಲ್ಲಿ ಪರಮೇಶ್ವರ್ ಅವರ ಮೇಲೂ ಇದೇ ರೀತಿ ನಿಂದನೆ ಹೊರಿಸಲಾಗಿತ್ತು ಎಂದು ಹೇಳಿದ ಸಿದ್ದರಾಮಯ್ಯ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಮೇಶ್ವರ್ ಒಬ್ಬ ಪ್ರಾಮಾಣಿಕ, ನಿಷ್ಠಾವಂತ ಜತೆಗೆ ಬುದ್ದಿವಂತ, ನನಗಿಂತ ಬುದ್ದಿವಂತ ಅಂದರೆ ತಪ್ಪಾಗಲಾರದು. ಅದಕ್ಕೆ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಯಾರೋ ನಮ್ಮ ರಾಜಕೀಯ ವಿರೋಧಿಗಳು, ಕಿಡಿಗೇಡಿಗಳು ಪರಮೇಶ್ವರ್ ಮೇಲೆ ಹಲ್ಲೆ ಮಾಡಿದ್ದಾರೆ, ಸೋಲುತ್ತೇವೆ ಎಂಬ ಹತಾಶೆಯಲ್ಲಿ ಇಂತಹ ಕೆಲಸ ಮಾಡಿದ್ದಾರೆ. ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಅವರು ಪರಮೇಶ್ವರ್ ಗೆಲುವು ಅಷ್ಟೇ ಸತ್ಯ ಎಂದರು.

lokesh

Recent Posts

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

59 mins ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

2 hours ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

3 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

3 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

3 hours ago