ತುಮಕೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಗೆದ್ದರೆ ನಾನು ಗೆದ್ದಂತೆ, ಅದನ್ನು ಅರಿತು ಜನರು ಮತ ಹಾಕಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊರಟಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಪರ ಪ್ರಚಾರ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಗಾಯಗೊಂಡಿರುವುದು ವಿರೋಧ ಪಕ್ಷಗಳ ಹತಾಶೆಯ ದ್ಯೋತಕವಾಗಿದೆ ಎಂದಿದೆ.
ಇತ್ತೀಚೆಗೆ ರಾಜೀವ್ ಭವನ ಉದ್ಘಾಟನೆಗೆ ನಾನು ಬಂದಿಲ್ಲ ಎಂದು ಅಪಪ್ರಚಾರ ಮಾಡಿದರು. 2013ರಲ್ಲಿ ಪರಮೇಶ್ವರ್ ಅವರ ಮೇಲೂ ಇದೇ ರೀತಿ ನಿಂದನೆ ಹೊರಿಸಲಾಗಿತ್ತು ಎಂದು ಹೇಳಿದ ಸಿದ್ದರಾಮಯ್ಯ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಮೇಶ್ವರ್ ಒಬ್ಬ ಪ್ರಾಮಾಣಿಕ, ನಿಷ್ಠಾವಂತ ಜತೆಗೆ ಬುದ್ದಿವಂತ, ನನಗಿಂತ ಬುದ್ದಿವಂತ ಅಂದರೆ ತಪ್ಪಾಗಲಾರದು. ಅದಕ್ಕೆ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಯಾರೋ ನಮ್ಮ ರಾಜಕೀಯ ವಿರೋಧಿಗಳು, ಕಿಡಿಗೇಡಿಗಳು ಪರಮೇಶ್ವರ್ ಮೇಲೆ ಹಲ್ಲೆ ಮಾಡಿದ್ದಾರೆ, ಸೋಲುತ್ತೇವೆ ಎಂಬ ಹತಾಶೆಯಲ್ಲಿ ಇಂತಹ ಕೆಲಸ ಮಾಡಿದ್ದಾರೆ. ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಅವರು ಪರಮೇಶ್ವರ್ ಗೆಲುವು ಅಷ್ಟೇ ಸತ್ಯ ಎಂದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…