ತುಮಕೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಗೆದ್ದರೆ ನಾನು ಗೆದ್ದಂತೆ, ಅದನ್ನು ಅರಿತು ಜನರು ಮತ ಹಾಕಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೊರಟಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಪರ ಪ್ರಚಾರ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಗಾಯಗೊಂಡಿರುವುದು ವಿರೋಧ ಪಕ್ಷಗಳ ಹತಾಶೆಯ ದ್ಯೋತಕವಾಗಿದೆ ಎಂದಿದೆ.
ಇತ್ತೀಚೆಗೆ ರಾಜೀವ್ ಭವನ ಉದ್ಘಾಟನೆಗೆ ನಾನು ಬಂದಿಲ್ಲ ಎಂದು ಅಪಪ್ರಚಾರ ಮಾಡಿದರು. 2013ರಲ್ಲಿ ಪರಮೇಶ್ವರ್ ಅವರ ಮೇಲೂ ಇದೇ ರೀತಿ ನಿಂದನೆ ಹೊರಿಸಲಾಗಿತ್ತು ಎಂದು ಹೇಳಿದ ಸಿದ್ದರಾಮಯ್ಯ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪರಮೇಶ್ವರ್ ಒಬ್ಬ ಪ್ರಾಮಾಣಿಕ, ನಿಷ್ಠಾವಂತ ಜತೆಗೆ ಬುದ್ದಿವಂತ, ನನಗಿಂತ ಬುದ್ದಿವಂತ ಅಂದರೆ ತಪ್ಪಾಗಲಾರದು. ಅದಕ್ಕೆ ಅವರನ್ನು ಪ್ರಣಾಳಿಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಯಾರೋ ನಮ್ಮ ರಾಜಕೀಯ ವಿರೋಧಿಗಳು, ಕಿಡಿಗೇಡಿಗಳು ಪರಮೇಶ್ವರ್ ಮೇಲೆ ಹಲ್ಲೆ ಮಾಡಿದ್ದಾರೆ, ಸೋಲುತ್ತೇವೆ ಎಂಬ ಹತಾಶೆಯಲ್ಲಿ ಇಂತಹ ಕೆಲಸ ಮಾಡಿದ್ದಾರೆ. ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಅವರು ಪರಮೇಶ್ವರ್ ಗೆಲುವು ಅಷ್ಟೇ ಸತ್ಯ ಎಂದರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…