BREAKING NEWS

ಶಾಂತಿ ಕದಡಿದರೆ ಆರ್‌ಎಸ್‌ಎಸ್‌ಗೂ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.

ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ ಎಂದು ಖಡಕ್ ಸಂದೇಶ ರವಾನಿಸಿದರು.

ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ನಮಗೆ ಯಾರ ಮುಲಾಜು ಇಲ್ಲ ಎಂದರು.

ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago