BREAKING NEWS

ಶಾಂತಿ ಕದಡಿದರೆ ಆರ್‌ಎಸ್‌ಎಸ್‌ಗೂ ನಿಷೇಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.

ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ ಎಂದು ಖಡಕ್ ಸಂದೇಶ ರವಾನಿಸಿದರು.

ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ. ನಮಗೆ ಯಾರ ಮುಲಾಜು ಇಲ್ಲ ಎಂದರು.

ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago