BREAKING NEWS

ಹೊರಗಿನ ಹುಡುಕಾಟಕ್ಕೆ ವಿಜ್ಞಾನವಾದರೆ ಅಂತರಂಗಕ್ಕೆ ಆಧ್ಯಾತ್ಮ : ಇಸ್ರೋ ಅಧ್ಯಕ್ಷ ಸೋಮನಾಥ್‌

ತಿರುವನಂತಪುರಂ : ವಿಕ್ರಂ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ಸ್ಥಳವನ್ನು ಶಿವಶಕ್ತಿ ಪಾಯಿಂಟ್‌ ಎಂದು ಪ್ರಧಾನಿ ಮೋದಿ ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಇಸ್ರೋ (ISRO) ಅಧ್ಯಕ್ಷ ಸೋಮನಾಥ್‌ ಹೇಳಿದ್ದಾರೆ.

ಚಂದ್ರಯಾನ-3 ಯಶಸ್ವಿಯಾದ ಬಳಿಕ ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು-ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಸೋಮನಾಥ್‌ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, ವಿಕ್ರಂ ಲ್ಯಾಂಡರ್‌ ಚಂದ್ರನನ್ನು ಸ್ಪರ್ಶಿಸಿದ ಜಾಗಕ್ಕೆ ಶಿವಶಕ್ತಿ ಎಂದು ನಾಮಕರಣ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆ ಸ್ಥಳಕ್ಕೆ ಹೆಸರಿಡುವ ಹಕ್ಕು ರಾಷ್ಟ್ರಕ್ಕೆ ಇದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ನಮಗೆಲ್ಲರಿಗೂ ಸರಿಹೊಂದುವ ರೀತಿಯಲ್ಲಿ ಶಿವಶಕ್ತಿ ಅರ್ಥವನ್ನು ವಿವರಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಚಂದ್ರಯಾನ–2 ಪತನವಾಗಿದ್ದ ಸ್ಥಳವನ್ನು ತಿರಂಗಾ ಪಾಯಿಂಟ್‌ ಎಂದು ಹೆಸರನ್ನು ಇರಿಸಿದ್ದಾರೆ. ಎರಡೂ ಭಾರತೀಯ ಧ್ವನಿಯ ಹೆಸರುಗಳಾಗಿವೆ. ನಾವು ಏನು ಮಾಡುತ್ತಿದ್ದೇವೆ ಎಂಬುದರ ಮಹತ್ವ ನಮಗೆ ತಿಳಿದಿರಬೇಕು ಎಂದು ಹೇಳಿದರು.

ನಾನೊಬ್ಬ ಅನ್ವೇಷಕ. ನಾನು ಚಂದ್ರನನ್ನು ಅನ್ವೇಷಿಸುತ್ತೇನೆ. ಆಂತರಂಗದ ಜಾಗವನ್ನು ಅನ್ವೇಷಿಸುತ್ತೇನೆ. ಹೊರಗಿನ ಹುಡುಕಾಟಕ್ಕೆ ವಿಜ್ಞಾನ. ಅಂತರಂಗದ ಹುಡುಕಾಟಕ್ಕೆ ಆಧ್ಯಾತ್ಮ. ನಾನು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತೇನೆ ಮತ್ತು ಅನೇಕ ಗ್ರಂಥಗಳನ್ನು ಓದುತ್ತೇನೆ. ಈ ಬ್ರಹ್ಮಾಂಡದಲ್ಲಿ ನಮ್ಮ ಅಸ್ತಿತ್ವ ಮತ್ತು ನಮ್ಮ ಪ್ರಯಾಣದ ಅರ್ಥವನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತೇನೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹೊರಗಡೆ ವಿಜ್ಞಾನ ಮಾಡಿದರೆ ಅಂತರಂಗಕ್ಕೆ ದೇವಸ್ಥಾನಗಳಿಗೆ ಬರುತ್ತೇನೆ ಎಂದು ಹೇಳಿದರು.

ಮಿಷನ್‌ನ ಪ್ರಸ್ತುತ ಸ್ಥಿತಿಯ ಬಗ್ಗೆ ಕೇಳಿದ್ದಕ್ಕೆ, ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಚಂದ್ರಯಾನ 3, ಲ್ಯಾಂಡರ್, ರೋವರ್ ತುಂಬಾ ಆರೋಗ್ಯಕರವಾಗಿದ್ದು, ಬೋರ್ಡ್‌ನಲ್ಲಿರುವ ಎಲ್ಲಾ ಐದು ಉಪಕರಣಗಳನ್ನು ಸ್ವಿಚ್ ಆನ್ ಮಾಡಲಾಗಿದೆ. ಇವುಗಳು ಸುಂದರವಾದ ಡೇಟಾವನ್ನು ನೀಡುತ್ತಿದೆ. ಇನ್ನೂ ಹತ್ತು ದಿನಗಳು ಉಳಿದಿವೆ. ವಿವಿಧ ವಿಧಾನಗಳ ಸಂಪೂರ್ಣ ಸಾಮರ್ಥ್ಯದೊಂದಿಗೆ ನಾವು ಎಲ್ಲಾ ಪ್ರಯೋಗಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಿಳಿಸಿದರು.

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago