ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳಾಗಿದೆ. ಇದುವರೆಗೂ ನಮಗೆ ಕಮಿಷನ್ ಕೇಳಿಲ್ಲ. ಒಂದು ವೇಳೆ ನನಗೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಶೇ.40ರಷ್ಟು ಕಮಿಷನ್ ವ್ಯವಹಾರ ನಡೆಯುತ್ತಿತ್ತು. ಆ ಬಗ್ಗೆ ಪ್ರಸ್ತಾಪ ಮಾಡಿದ್ದೆವು. ಮೂರು ವರ್ಷಗಳ ಕಾಲ ಬಿಜೆಪಿ ಸರ್ಕಾರದಲ್ಲಿ ಹೋರಾಟ ನಡೆಸಲಾಗಿತ್ತು. ಈಗ ತಮ್ಮನ್ನು ಪ್ರಶ್ನೆ ಮಾಡುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕಾರದಲ್ಲಿದ್ದಾಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.
ಹಲವು ಬಾರಿ ತನಿಖೆಗೆ ಮನವಿ ಮಾಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಈ ಸರ್ಕಾರ ಬಂದು ಇನ್ನೂ ತಿಂಗಳಾಗಿದೆ. ಶೇ. 40 ರಷ್ಟು ಕಮಿಷನ್ ಕೇಳುತ್ತದೆಯೋ ಇಲ್ಲವೋ ಗೊತ್ತಿಲ್ಲ. ಒಂದು ವೇಳೆ ಕೇಳಿದರೆ ನಾನೇ ಬಹಿರಂಗ ಮಾಡುತ್ತೇನೆ. ಅನಗತ್ಯವಾಗಿ ಆರೋಪ ಮಾಡಲು ಹೋಗುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಮೃದು ಧೋರಣೆ ಅನುಸರಿಸುವುದಿಲ್ಲ ಎಂದರು.
ಮುಖ್ಯಮಂತ್ರಿಯೊಂದಿಗಿನ ಸಭೆಯಲ್ಲಿ ಸರ್ಕಾರಕ್ಕೆ ಏನು ಹೇಳಬೇಕೊ ಅದನ್ನು ಹೇಳಿದ್ದೇವೆ. ಗುತ್ತಿಗೆದಾರರಿಗೆ ಸರ್ಕಾರದಿಂದ 20 ಸಾವಿರ ಕೋಟಿ ರೂ.ಗಳ ಬಿಲ್ ಪಾವತಿ ಆಗಬೇಕಿದೆ. ಅದನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಇದರ ಹೊರತಾಗಿ ಶೇ.40ರಷ್ಟು ಕಮಿಷನ್ ಸೇರಿದಂತೆ ಬೇರಾವ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪಗಳಿವೆ. ಸಮಯ ಬಂದಾಗ ದಾಖಲಾತಿ ಬಿಡುಗಡೆ ಮಾಡುತ್ತೇವೆ. ಸದ್ಯಕ್ಕೆ ಪ್ರಕರಣ ನ್ಯಾಯಾಲಯದ ಮೆಟ್ಟಿಲಿನಲ್ಲಿದೆ. ಹೀಗಾಗಿ ಪ್ರಸ್ತುತ ಆ ವಿಚಾರದ ಬಗ್ಗೆ ಹೆಚ್ಚು ಚರ್ಚಿಸುವುದಿಲ್ಲ ಎಂದು ತಿಳಿಸಿದರು
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…