BREAKING NEWS

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ : ಬಿಜೆಪಿ

ಬೆಂಗಳೂರು : ತನ್ನ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಧಿಸಲು ದೇಶದ ಭದ್ರತೆಯ ವಿಷಯದಲ್ಲಿ ರಾಜೀಯಾಗುವ, ವಿಶ್ವದ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ. ಸಕಲರಿಗೂ ನೆಮ್ಮದಿಯ ತಾಣವಾಗಿದ್ದ ಬೆಂಗಳೂರು ಈಗ ಭಯೋತ್ಪಾದಕರ ಬೀಡಾಗುತ್ತಿದೆ ಎಂದು ಬಿಜೆಪಿ ಭಾನುವಾರ ಹೇಳಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ತನ್ನ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಧಿಸಲು ದೇಶದ ಭದ್ರತೆಯ ವಿಷಯದಲ್ಲಿ ರಾಜೀಯಾಗುವ, ವಿಶ್ವದ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ. ಸಕಲರಿಗೂ ನೆಮ್ಮದಿಯ ತಾಣವಾಗಿದ್ದ ಬೆಂಗಳೂರು ಈಗ ಭಯೋತ್ಪಾದಕರ ಬೀಡಾಗುತ್ತಿದೆ. ಆದರೆ ಈ ಬಗ್ಗೆ ತುಘಲಕ್ ಸರ್ಕಾರದ ಪ್ರತಿನಿಧಿಗಳು, ಬಂಧನವಾದ ಉಗ್ರರ ಸಮಗ್ರ ತನಿಖೆಗೂ ಮುನ್ನ ಉಗ್ರರಿಗೆ ಕ್ಲೀನ್ ಚಿಟ್ ನೀಡಲು ಪ್ರಯತ್ನಿಸುತ್ತಿದ್ದಾರೆಂದು ಹೇಳಿದೆ.

ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಉಗ್ರಗಾಮಿಗಳ ಪರ ತನ್ನ ಮೃದು ಧೋರಣೆಯನ್ನು ತೋರುತ್ತಾ ಬಂದಿದೆ. ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗುವ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದರೇ, ಅವರಿಗೆ ಕಾನೂನು ನೆರವನ್ನು ಒದಗಿಸಲು ಕಾಂಗ್ರೆಸ್‌ನ ಲೀಗಲ್ ಸೆಲ್ ಸದಾ ಸಿದ್ದವಾಗಿರುತ್ತದೆ.

ಭಯೋತ್ಪಾದಕ ಕೃತ್ಯಗಳಿಂದ ಸೈನಿಕರು, ದೇಶದ ಜನಸಾಮಾನ್ಯರು ಬಲಿಯಾದರೇ ಅದಕ್ಕೆ ಸಂತಾಪ ಸೂಚಿಸದ ಕಾಂಗ್ರೆಸ್, ಒಂದು ವೇಳೆ ಭಯೋತ್ಪಾದಕನೊಬ್ಬ ಪೊಲೀಸರ ಗುಂಡಿಗೆ ಬಲಿಯಾದರೇ ಅದಕ್ಕೆ ಕಣ್ಣೀರು ಸುರಿಸುತ್ತದೆ. ಹಲವಾರು ವಿಧ್ವಂಸಕ ಕೃತ್ಯ ನಡೆಸಿ, ಅಮಾಯಕರನ್ನು ಬಲಿ ಪಡೆದ ಭಯೋತ್ಪಾದಕ ಮಸೂದ್ ಅಜರ್‌ನನ್ನು, ರಾಹುಲ್ ಗಾಂಧಿ ಮಸೂದ್”ಜೀ” ಎಂದು ಕರೆಯುವ ಮೂಲಕ, ಉಗ್ರರ ಬಗ್ಗೆ ತಮಗಿರುವ ಆಂತರಿಕ ಪ್ರೇಮವನ್ನು ವ್ಯಕ್ತಪಡಿಸಿದ್ದರು.

ಈ ಹಿಂದೆ, ಭಯೋತ್ಪಾದಕರ ವಿರುದ್ಧ ನಡೆದ ಬಾಟ್ಲಾ ಹೌಸ್ ಎನ್ ಕೌಂಟರ್, ಇಶ್ರತ್ ಜಹಾನ್ ಎನ್‌ಕೌಂಟರ್‌ಗಳನ್ನು ನಕಲಿ ಎಂದು ಆರೋಪಿಸಿ ಕಾಂಗ್ರೆಸ್ ಬಹಿರಂಗವಾಗಿ ಭಯೋತ್ಪಾದಕರ ಹಾಗೂ ಆ ಸಂಘಟನೆಗಳ ಪರ ನಿಂತಿತ್ತು. ಅದೇ ರೀತಿ ಉಗ್ರಗಾಮಿಗಳಿಗೆ ಸಿಂಹಸ್ವಪ್ನವಾಗಿದ್ದ ಪೋಟಾ ಕಾಯಿದೆಯನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್, ಭಯೋತ್ಪಾದಕರಿಗೆ ನೈತಿಕ ಬಲ ನೀಡಿತ್ತು ಎಂದು ತಿಳಿಸಿದೆ.

ದೇಶದ ರಕ್ಷಣಾ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದ 26/11 ಮುಂಬೈ ದಾಳಿಯ ಸಂದರ್ಭದಲ್ಲಿ ದೇಶವೇ ಒಟ್ಟಾಗಿ ನಿಲ್ಲಬೇಕಿತ್ತು. ಆದರೆ, ಅದಕ್ಕೆ ‘ಹಿಂದೂ ಭಯೋತ್ಪಾದಕರ ಕೃತ್ಯ’ ಎಂಬ ಸುಳ್ಳು ತೇಲಿ ಬಿಟ್ಟು, ನೈಜ ಉಗ್ರಗಾಮಿಗಳ ಕೃತ್ಯವನ್ನು ಮರೆಮಾಚಲು ಕಾಂಗ್ರೆಸ್ ಯತ್ನಿಸಿತ್ತು. ಈ ರೀತಿಯಾಗಿ ನಮ್ಮ ಸೈನ್ಯದ ಹಾಗೂ ಪೊಲೀಸರ ಆತ್ಮ ಬಲವನ್ನು ಕುಗ್ಗಿಸುವ ಕೀಳು ಪ್ರಯತ್ನವನ್ನು ಕಾಂಗ್ರೆಸ್ ದಶಕಗಳಿಂದ ಮಾಡುತ್ತಿದೆ.

ಹೀಗಾಗಿ ಭಯೋತ್ಪಾದಕ ಸಂಘಟನೆಗಳು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ತಮ್ಮ ಸ್ಲೀಪರ್ ಸೆಲ್‌ಗಳನ್ನು ಜಾಗೃತಗೊಳಿಸುತ್ತವೆ, ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸುತ್ತವೆ. ಇದೆಲ್ಲವೂ ಕಾಂಗ್ರೆಸ್ ಪಕ್ಷ ಉಗ್ರರ ಮೇಲೆ ಹೊಂದಿರುವ ಮೃದು ಧೋರಣೆಯ ಪ್ರತೀಕವಾಗಿದೆ ಎಂದು ಹೇಳಿದೆ.

ಈಗ ಗೃಹ ಸಚಿವ ಪರಮೇಶ್ವರ್ ಕೊಟ್ಟಿರುವ ಹೇಳಿಕೆಯೂ ಇದರದೇ ಭಾಗ, ತನ್ನ ಓಲೈಕೆ ರಾಜಕಾರಣಕ್ಕಾಗಿ, ಕಾಂಗ್ರೆಸ್ ಪಕ್ಷ ದೇಶದ ಭದ್ರತೆಯ ವಿಚಾರದಲ್ಲಿ ರಾಜೀಯಾಗುವಂತಹ ಧೋರಣೆಯನ್ನು ಅನುಸರಿಸುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ತಿಳಿಸಿದೆ.

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago