BREAKING NEWS

ದೇಶ ಸುರಕ್ಷಿತವಾಗಿ‌ ಉಳಿಯಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ರಾಜ್ಯ ಸರ್ಕಾದ ಐದು ಗ್ಯಾರಂಟಿಗಳ ಬಗ್ಗೆ ಇಡೀ ದೇಶದ ಜನರೇ ಶ್ಲಾಘನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಶಿವಕುಮಾರ ನೇತೃತ್ವದಲ್ಲಿ ಈ ಗ್ಯಾರಂಟಿಗಳು ಜಾರಿಗೆ ಬರುತ್ತಿವೆ ಎಂದು ಲೋಕಸಭಾ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಗೃಹ ಜ್ಯೋತಿ ಯೋಜನೆಯ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಡವರಿಗಾಗಿ, ಯುವಕರಿಗಾಗಿ, ಕೂಲಿ ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ‌ ಬಂದಾಗೆಲ್ಲ ಜಾರಿಗೆ ತಂದಿದೆ. ಅಂತಹ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಈ‌ ಹಿಂದಿನ ಅವಧಿಯಲ್ಲಿ ಜಾರಿಗೆ ತಂದರೂ ಕೂಡಾ ಜನರು ಯಾಕೋ ಆಶೀರ್ವಾದ ಮಾಡಲಿಲ್ಲ ಎಂದರು.

ಮನಸಿದ್ದರೆ ಮಾರ್ಗ ಸಿಗುತ್ತದೆ. ಯಾರು ಬಡವರ ಬಗ್ಗೆ ಚಿಂತನೆ ಮಾಡುತ್ತಾರೋ‌ ಅವರು ಯೋಜನೆಗಳನ್ನು ಜಾರಿಗೆ ತರಲು ದುಡ್ಡು ಹುಡುಕುತ್ತಾರೆ ಎಂದು ಹೇಳಿ ಸಿಎಂ, ಡಿಸಿಎಂ ಹಾಗೂ ಇಂಧನ ಸಚಿವರಿಗೆ ಮೆಚ್ಚುಗೆ ಸೂಸಿ‌ ಅಭಿನಂದನೆ ಸಲ್ಲಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರವನ್ನು‌ ನುಡಿದಂತೆ ನಡೆದ ಸರ್ಕಾರ ಎಂದು ಪ್ರಶಂಸಿಸಿದ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ” ಪ್ರತಿ ವರ್ಷ 2 ಕೋಟಿ ಉದ್ಯೋಗ, ವಿದೇಶದಿಂದ ಕಪ್ಪು ಹಣ ವಾಪಸ್ ತಂದು ಪ್ರತಿ ಕುಟುಂಬಕ್ಕೆ ಹದಿನೈದು ಲಕ್ಷ ಕೊಡುವುದಾಗಿ ಹೇಳಿದ್ದರು. ಎಲ್ಲಿ ಹದಿನೈದು ಲಕ್ಷ ಎಲ್ಲಿ ಹೋಯಿತು? ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಅವರು ತಮ್ಮ ಬಳಿ ಇರುವ ಇಂಟಲಿಜೆನ್ಸಿ ಮೂಲಕ ವರದಿ ತರಿಸಿಕೊಂಡು ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿರುವ ಬಗ್ಗೆ ತಿಳಿದುಕೊಳ್ಳಲಿ ಎಂದು ಟಾಂಗ್ ನೀಡಿದ ಖರ್ಗೆ, ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ ರಾಜ್ಯ ಸರ್ಕಾರ ದಿವಾಳಿಯಾಗಲಿದೆ ಎಂದು ಮೋದಿ ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದರು ಎಂದು ನೆನಪಿಸಿಕೊಂಡರು.

ಈ‌ ದೇಶ ಸುರಕ್ಷಿತವಾಗಿ‌ ಉಳಿಯಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಒತ್ತಿ ಹೇಳಿದ ಖರ್ಗೆ ಅವರು ಬಡವರ, ಮಹಿಳೆಯರ, ದೀನ ದಲಿತರ ಹಾಗೂ ಸಂವಿಧಾನದ ಉಳಿವಿಗಾಗಿ ಜನರು ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸಬೇಕು ಎಂದರು.

ಕಲ್ಯಾಣ ಕರ್ನಾಟಕದ ಜನರಿಗೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಮುಂದುವರೆಯಬೇಕು ಹಾಗೆ ಮುಂದುವರೆಯಲು ಅವರಿಗೆ ಧೈರ್ಯದ ಕೊರತೆ‌ ಇಲ್ಲ. ನಾನು ಕೂಡಾ ವಿದ್ಯಾರ್ಥಿ ದೆಸೆಯಿಂದಲೇ ಇದೇ ಎನ್ ವಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ನ ಮಹಾನ್ ನಾಯಕರು ಮಾಡಿದ ಭಾಷಣ ಕೇಳಿದ್ದೇನೆ ಎಂದು ತಮ್ಮ‌ ವಿದ್ಯಾರ್ಥಿ ಜೀವನ ಮೆಲುಕು ಹಾಕಿ ಆರ್ಟಿಕಲ್ 371 J ಅಡಿಯಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪ್ರತಿಪಾದಿಸಿದರು.

ಕಲ್ಯಾಣ ಕರ್ನಾಟಕದ ಬಗ್ಗೆ ಕಾಳಜಿ ವಹಿಸುವಂತೆ ಸಿಎಂ ಹಾಗೂ ಡಿಸಿಎಂ ಗೆ ಹೇಳಿದ ಅವರು ಈ ಭಾಗದಿಂದ‌ ನಿಮಗೆ ಯಾವಾಗಲೂ 25 ಸೀಟು ಬಂದಿವೆ. ಕಕ ಭಾಗದಲ್ಲಿ ಏನು ಅಭಿವೃದ್ದಿ ಮಾಡಬೇಕು ಎನ್ನುವುದರ ಬಗ್ಗೆ ನೀವಿಬ್ಬರೂ ಆಗಾಗ ಪ್ರಗತಿ ಪರಿಶೀಲನೆ ಮಾಡಬೇಕು.‌ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸೇರಿದಂತೆ ಈ ಭಾಗದ ಸಮಗ್ರ ಅಭಿವೃದ್ದಿಗೆ ಒತ್ತು ನೀಡಬೇಕು.‌ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ವಿಶೇಷ ಒತ್ತು ನೀಡಬೇಕು. ಬೀದರ್, ಕಲಬುರಗಿ, ಯಾದಗಿರಿ,‌ಕೊಪ್ಪಳ ಜಿಲ್ಲೆಗಳು ಸೇರಿದಂತೆ ಕಕ ಭಾಗದ ಎಲ್ಲ ಜಿಲ್ಲೆಗಳು ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ತಳಮಟ್ಟದಲ್ಲಿವೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

andolanait

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

38 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

2 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago