ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡ ಅವರಾಗಲಿ ನಾನಾಗಲಿ ಹೆಣ್ಣು ಮಕ್ಕಳಿಗೆ ಎಂದಿಗೂ ಅನ್ಯಾಯ ಆಗಲು ಬಿಟ್ಟಿಲ್ಲ. ಅವರ ವಿಚಾರದಲ್ಲಿ ಅತ್ಯಂತ ಗೌರವಯುತವಾಗಿ, ಅವರ ಕಷ್ಟಗಳನ್ನು ಪರಿಹರಿಸಿ ಕಳಿಸುವ ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.
ಹಾಸನದ ಸಂಸದ ಪ್ರಜ್ವಲ್ ರೇವಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್ಐಟಿ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆಯಲ್ಲಿ ಎಲ್ಲಾ ಹೊರಗೆ ಬರಲಿ. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಡಿರಲಿ ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದರು.
ವಿದೇಶದಿಂದ ಅಧಿಕಾರಿಗಳು ಕರೆದು ತರುತ್ತಾರೆ : ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದರೆ ನಾನೇನು ಮಾಡಲಿ, ಎಸ್ಐಟಿ ತಂಡವನ್ನು ರಚಿಸಲಾಗಿದೆ. ಅಲ್ಲಿಯ ಅಧಿಕಾರಿಗಳು ಪ್ರಜ್ವಲ್ರನ್ನು ಕರೆತರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…