BREAKING NEWS

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು- ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು.

ಸಿದ್ದಲಿಂಗಯ್ಯನವರ ಕವನಗಳು ಸಮಾಜದ ವಸ್ತು ಸ್ಥಿತಿಗೆ ಕನ್ನಡಿ ಹಿಡಿದಿವೆ. ಅಸಮಾನತೆ, ತಾರತಮ್ಯದ ವಿರುದ್ಧ ಸಮಾಜವನ್ನು ಎಚ್ಚರಿಸುವ ಧ್ವನಿ ಸಿದ್ದಲಿಂಗಯ್ಯ ಅವರ ಕವನಗಳಲ್ಲಿವೆ. ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಸ್ಮರಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಚಳವಳಿಗಳ ಉತ್ಪತ್ತಿ. ಇಚರು ಬಜೆಟ್ ನಲ್ಲಿ ಕೊಟ್ಟಿರುವ ಕಾರ್ಯಕ್ರಮಗಳು, ದಲಿತರ ಪರವಾದ ಕಾಯ್ದೆ ಮತ್ತು ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿರುವುದೇ ಅವರು ಸಂವಿಧಾನದ ನಿಜವಾದ ರಕ್ಷಕರು ಮತ್ತು ಪಾಲಕರು ಎಂದು ಬಣ್ಣಿಸಿದರು.

ಕಾರ್ಯಕ್ರಮದ ನಿರೂಪಕ ಲಕ್ಷ್ಮೀನಾರಾಯಣ್ ,ಕುವೆಂಪು ಅವರು 40 ರ ದಶಕದಲ್ಲಿ ದಲಿತ-ಬಡವರ ಏಳಿಗೆಗೆ ಕಲ್ಕಿಯ ಉದಯ ಆಗಬೇಕು ಎನ್ನುವ ಆಶಯದ ಕವನ ಬರೆದಿದ್ದರು. 1948 ರಲ್ಲಿ ಕುವೆಂಪು ಕನಸಿನ ಕಲ್ಕಿ ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಜನಿಸಿದರು. ಅವರೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಣ್ಣಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

3 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

4 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

6 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

7 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

8 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

8 hours ago