BREAKING NEWS

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು- ಬರೀ ಅಂಬಾನಿ-ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರಿಗೆ, ಮಧ್ಯಮವರ್ಗದವರ ಉದ್ದಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ. ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ. ಈ ಕಾರಣಕ್ಕೆ ನಮ್ಮ ಸರ್ಕಾರ ತಿಮ್ಮ-ಬೋರ-ಕಾಳನ ಶ್ರಮಿಕ ವರ್ಗದ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಜನರ ಜೇಬಿಗೆ ಹಣ ಹಾಕುವ ಕೆಲಸಕ್ಕೆ ಮುಂದಾಗಿದ್ದೇವೆ. ಇದರಿಂದ ನಮ್ಮ ಆರ್ಥಿಕತೆ ಚೈತನ್ಯ ಪಡೆದುಕೊಳ್ಳುತ್ತಿದೆ ಎಂದು ವಿವರಿಸಿದರು.

ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ ? ಅಂಬಾನಿ-ಅದಾನಿಯವರ ಜೇಬು ತುಂಬಿಸುವವರ ಕೈಗೆ ಕೇಂದ್ರದಲ್ಲಿ ಅಧಿಕಾರ ಕೊಟ್ಟು ಬಡವರ, ಮಧ್ಯಮ ವರ್ಗದವರ ಉದ್ಧಾರ ಆಗಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟು ಯಾರಿಗೆ ಬಂತು, ಎಲ್ಲಿಗೆ ಬಂತು 47 ರ ಸ್ವಾತಂತ್ರ್ಯ ಎಂದು ಪ್ರಶ್ನಿಸಿದರೆ ಹೇಗೆ ಎಂದು ಸಭಿಕರನ್ನು ಪ್ರಶ್ನಿಸಿದರು.

ಸಿದ್ದಲಿಂಗಯ್ಯನವರ ಕವನಗಳು ಸಮಾಜದ ವಸ್ತು ಸ್ಥಿತಿಗೆ ಕನ್ನಡಿ ಹಿಡಿದಿವೆ. ಅಸಮಾನತೆ, ತಾರತಮ್ಯದ ವಿರುದ್ಧ ಸಮಾಜವನ್ನು ಎಚ್ಚರಿಸುವ ಧ್ವನಿ ಸಿದ್ದಲಿಂಗಯ್ಯ ಅವರ ಕವನಗಳಲ್ಲಿವೆ. ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಸ್ಮರಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಚಳವಳಿಗಳ ಉತ್ಪತ್ತಿ. ಇಚರು ಬಜೆಟ್ ನಲ್ಲಿ ಕೊಟ್ಟಿರುವ ಕಾರ್ಯಕ್ರಮಗಳು, ದಲಿತರ ಪರವಾದ ಕಾಯ್ದೆ ಮತ್ತು ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಅವರು ಜಾರಿ ಮಾಡುತ್ತಿರುವುದೇ ಅವರು ಸಂವಿಧಾನದ ನಿಜವಾದ ರಕ್ಷಕರು ಮತ್ತು ಪಾಲಕರು ಎಂದು ಬಣ್ಣಿಸಿದರು.

ಕಾರ್ಯಕ್ರಮದ ನಿರೂಪಕ ಲಕ್ಷ್ಮೀನಾರಾಯಣ್ ,ಕುವೆಂಪು ಅವರು 40 ರ ದಶಕದಲ್ಲಿ ದಲಿತ-ಬಡವರ ಏಳಿಗೆಗೆ ಕಲ್ಕಿಯ ಉದಯ ಆಗಬೇಕು ಎನ್ನುವ ಆಶಯದ ಕವನ ಬರೆದಿದ್ದರು. 1948 ರಲ್ಲಿ ಕುವೆಂಪು ಕನಸಿನ ಕಲ್ಕಿ ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಜನಿಸಿದರು. ಅವರೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಣ್ಣಿಸಿದರು.

ಮಾಜಿ ಸಚಿವ ಹೆಚ್.ಆಂಜನೇಯ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್, ಡಾ.ಮಾನಸ ಸಿದ್ದಲಿಂಗಯ್ಯ ಸೇರಿ ಹಲವರು ಉಪಸ್ಥಿತರಿದ್ದರು.

andolanait

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

19 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

22 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

22 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

22 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

22 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

22 hours ago